social_icon
  • Tag results for Mekedatu

ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಮೇಕೆದಾಟು ಯೋಜನೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ

68 ಟಿಎಂಸಿ ಅಡಿ ಕಾವೇರಿ ನೀರು ಸಂಗ್ರಹಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯಿಂದ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

published on : 3rd September 2023

ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ: ಡಿಕೆ ಶಿವಕುಮಾರ್

ಕರ್ನಾಟಕ-ತಮಿಳುನಾಡು ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಇಲ್ಲಿ ಹೇಳಿದರು.

published on : 26th August 2023

ಮೇಕೆದಾಟು ಅಣೆಕಟ್ಟು ಯೋಜನೆ: 60 ದಿನಗಳಲ್ಲಿ ಸಮೀಕ್ಷೆ ಪೂರ್ಣ ಸಾಧ್ಯತೆ!

ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಶ್ವತ ಕುಡಿಯುವ ನೀರು ಪೂರೈಕೆ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೇಕೆದಾಟು ಯೋಜನೆಗೆ ಭೂಮಿ ಹಾಗೂ ಮರಗಳ ಎಣಿಕೆ ಕುರಿತು ಆರಂಭವಾದ ಸಮೀಕ್ಷೆಯ 60 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.

published on : 2nd August 2023

ಮೇಕೆದಾಟು ಯೋಜನೆ: ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆ ಆರಂಭ

ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಉತ್ಸುಕವಾಗಿರುವ ರಾಜ್ಯ ಸರ್ಕಾರ, ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆಯನ್ನು ಆರಂಭಿಸಲಿದೆ ಎಂದು ತಿಳಿದುಬಂದಿದೆ.

published on : 28th July 2023

ಕರ್ನಾಟಕ ಬಜೆಟ್ 2023: 'ಇದೊಂದು ಕೆಟ್ಟ ಯೋಜನೆ'; ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ

ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ನಟ-ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ.

published on : 8th July 2023

ಮೇಕೆದಾಟು ಯೋಜನೆ ಬದಲು ಬೆಂಗಳೂರಿನ ರಾಜ ಕಾಲುವೆಗಳನ್ನು ಪುನಶ್ಚೇತನಗೊಳಿಸಿ: ಪರಿಸರವಾದಿಗಳ ಸಲಹೆ

ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೇಕೆದಾಟು ಜಲಾಶಯದ ಯೋಜನೆಗೆ ಮುಂದಾಗುವ ಬದಲು ಬೆಂಗಳೂರಿನ ರಾಜ ಕಾಲುವೆಗಳು ಮತ್ತು ಹಾಳಾದ ಕೆರೆಗಳನ್ನು ಪುನಶ್ಚೇತನಗೊಳಿಸಲು ಪರಿಸರವಾದಿಗಳು ಸಲಹೆ ನೀಡಿದ್ದಾರೆ.

published on : 3rd July 2023

ಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

published on : 1st June 2023

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ; ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಕಿವಿಮಾತು ಹೇಳಿದೆ.

published on : 1st June 2023

ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್

ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

published on : 26th May 2023

ಮೇಕೆದಾಟು ಅಣೆಕಟ್ಟು ಯೋಜನೆ: ಕರ್ನಾಟಕ- ತಮಿಳುನಾಡು ಸಂಬಂಧ ಹದಗೆಡುವ ಸಾಧ್ಯತೆ

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾವೇರಿ ನದಿಯ ಮೇಕೆದಾಟು ಅಣೆಕಟ್ಟು ವಿವಾದ ತಮಿಳುನಾಡಿಗೆ ದೊಡ್ಡ ತಲೆನೋವಾಗುವ ಸಾಧ್ಯತೆಯಿದೆ.

published on : 20th May 2023

ವಿಧಾನಸಭಾ ಚುನಾವಣೆ: ಮತದಾರರ ಓಲೈಸಲು ರೈತರ ಕಾರ್ಡ್ ಬಳಸಿದ ಡಿಕೆಶಿ, ಮೇಕೆದಾಟು ಯೋಜನೆ ಜಾರಿಗೆ ತರುವುದಾಗಿ ಘೋಷಣೆ!

ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯ ಹಾಗೂ ರೈತರ ಮನ ಗೆಲ್ಲಬೇಕೆಂಬ ಹಂಬಲದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಪ್ರಚಾರದ ವೇಳೆ ರೈತ ಕಾರ್ಡ್ ಅನ್ನು ಬಳಕೆ ಮಾಡಿದ್ದು, ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬದ್ಧ ಎಂದು ಶನಿವಾರ ಘೋಷಿಸಿದ್ದಾರೆ.

published on : 12th February 2023

ಮೇಕೆದಾಟು ಯೋಜನೆ: ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ

ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಮಂಗಳವಾರ ಹೇಳಿದೆ.

published on : 11th January 2023

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗರಂ: ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೊಟೀಸ್

ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಇಂದು ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದೆ.

published on : 12th January 2022

ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ?: ಮೇಕೆದಾಟು ವಿಚಾರವಾಗಿ ಕುಮಾರಸ್ವಾಮಿ ಸರಣಿ ಟ್ವೀಟ್

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

published on : 20th July 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9