social_icon
  • Tag results for Newdelhi

ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಲಿದೆ.

published on : 4th June 2023

ಮುಸ್ಲಿಂ ಲೀಗ್ ಜಾತ್ಯತೀತ: ರಾಹುಲ್ ಹೇಳಿಕೆ ವಿವಾದ, ಅಡ್ವಾಣಿ ಜಿನ್ನಾ ಹೊಗಳಿದ್ದು ನೆನಪಿದೆಯೇ? ಕಾಂಗ್ರೆಸ್ 

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಎಂಬ ಹೇಳಿಕೆ ವಿರುದ್ಧ ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಶುಕ್ರವಾರ ತಿರುಗೇಟು ನೀಡಿದೆ. ಅಡ್ವಾಣಿ ಕೂಡಾ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಹೊಗಳಿದ್ದು ನೆನಪಿದೆಯೇ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ. 

published on : 2nd June 2023

ಏಪ್ರಿಲ್‌‌ನಲ್ಲಿ ಸುಮಾರು 74 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್!

ಮೆಟಾ ಮಾಲೀಕತ್ವದ ವಾಟ್ಸಾಪ್ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ  74 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ.  ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.

published on : 1st June 2023

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳು

ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ.

published on : 30th May 2023

ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರು

ವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 30th May 2023

ಟ್ರಕ್ ಯಾತ್ರೆ ಯಲ್ಲಿ ಚಾಲಕರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ- ವಿಡಿಯೋ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡೀ ರಾತ್ರಿ ಟ್ರಕ್ ನಲ್ಲಿ ಪ್ರಯಾಣಿಸಿದ್ದು, ಚಾಲಕರ ಕುಂದುಕೊರತೆ ಆಲಿಸಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಚಂಡೀಘಡಕ್ಕೆ ಪ್ರಯಾಣಿಸಿರುವ ರಾಹುಲ್ ಗಾಂಧಿ, ಚಾಲಕರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

published on : 30th May 2023

ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆ

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

published on : 29th May 2023

ಕುಸ್ತಿಪಟುಗಳು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವಂತಿಲ್ಲ; ಬೇರೆ ಕಡೆ ಅವಕಾಶ: ದೆಹಲಿ ಪೊಲೀಸರು

ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು  ಕಳೆದೊಂದು ತಿಂಗಳಿನಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ನಿನ್ನೆ ಅಲ್ಲಿಂದ ಅವರನ್ನು ತೆರವುಗೊಳಿಸಿದ ನಂತರ ಅಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

published on : 29th May 2023

ಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!

ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.

published on : 29th May 2023

ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿ

ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದಿನ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಬಂಧಿಸಿ, ಎಫ್ ಐಆರ್ ಕೂಡಾ ದಾಖಲಾಗಿದೆ.

published on : 29th May 2023

'ಪ್ರಜಾಪ್ರಭುತ್ವದ ದೇಗುಲ' ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

published on : 28th May 2023

ನಾಳೆ ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ

ನಾಳೆ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ನೂತನ ಕಟ್ಟಡದ ಸುತ್ತಲೂ ಸುಮಾರು 70 ಪೊಲೀಸರನ್ನು ನಿಯೋಜಿಸಲಾಗಿದೆ.

published on : 27th May 2023

ನೂತನ ಸಂಸತ್ ಭವನ: ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ  ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ. 

published on : 26th May 2023

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ

ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.

published on : 26th May 2023

ಆರ್ಥಿಕ ಬಿಕ್ಕಟ್ಟು: ಮೇ 28 ರವರೆಗೆ ಎಲ್ಲಾ ಗೋ ಫಸ್ಟ್ ವಿಮಾನ ರದ್ದು

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಗೋ ಫಸ್ಟ್ ವಿಮಾನಯಾನ ಸಂಸ್ಥೆ ಮೇ 28 ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಮೇ. 26 ರವರೆಗೆ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು. 

published on : 26th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9