- Tag results for Omicron
![]() | ಭಾರತದಲ್ಲಿ ಮತ್ತೆ ಸಮುದಾಯದತ್ತ ಕೋವಿಡ್ ಪ್ರವೇಶ; ಮುಂದಿನ 10-12 ದಿನಗಳವರೆಗೆ ಪ್ರಕರಣಗಳ ಹೆಚ್ಚಳ ಸಾಧ್ಯತೆಭಾರತದಲ್ಲಿ ಕೋವಿಡ್ ಸಮುದಾಯದತ್ತ ಸಾಗುತ್ತಿದೆ. ಆದ್ದರಿಂದ, ಮುಂದಿನ 10-12 ದಿನಗಳವರೆಗೆ ಪ್ರಕರಣಗಳು ಹೆಚ್ಚಾಗಬಹುದು. ನಂತರವೇ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. |
![]() | ಬೆಂಗಳೂರು; ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಪತ್ತೆ, ಹೆಚ್ಚಿದ ಆತಂಕಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (BMCRI) ಜೀನೋಮಿಕ್ ಅನುಕ್ರಮ ಪರೀಕ್ಷೆಗಾಗಿ ಕಳುಹಿಸಲಾದ ಎರಡನೇ ಸೆಟ್ ಕೋವಿಡ್-19 ಪಾಸಿಟಿವ್ ಮಾದರಿಗಳಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್'ಗಳಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. |
![]() | ಅಂತರರಾಷ್ಟ್ರೀಯ ಪ್ರಯಾಣಿಕರ ಕೋವಿಡ್ ಪರೀಕ್ಷೆ; 11 ಓಮಿಕ್ರಾನ್ ಉಪ-ರೂಪಾಂತರಗಳು ಪತ್ತೆ: ಮೂಲಗಳುಡಿಸೆಂಬರ್ 24 ಮತ್ತು ಜನವರಿ 3 ರ ನಡುವೆ ಅಂತರರಾಷ್ಟ್ರೀಯ ಪ್ರಯಾಣಿಕರ ಕೋವಿಡ್ ಪರೀಕ್ಷೆಯ ಸಮಯದಲ್ಲಿ ಹನ್ನೊಂದು ಓಮಿಕ್ರಾನ್ ಉಪ-ರೂಪಾಂತರಗಳು ಕಂಡುಬಂದಿವೆ ಮತ್ತು ಈ ಎಲ್ಲಾ ರೂಪಾಂತರಗಳು ಭಾರತದಲ್ಲಿ ಈ ಹಿಂದೆಯೇ ವರದಿಯಾಗಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. |
![]() | ಬಂಗಾಳದಲ್ಲಿ ಓಮಿಕ್ರಾನ್ ನ ಉಪತಳಿ ಬಿಎಫ್.7 ನ ನಾಲ್ಕು ಪ್ರಕರಣಗಳು ಪತ್ತೆಓಮಿಕ್ರಾನ್ ನ ಉಪತಳಿ ಬಿಎಫ್.7 ನ ಉಪತಳಿಗಳ ನಾಲ್ಕು ಪ್ರಕರಣಗಳು ಬಂಗಾಳದಲ್ಲಿ ಪತ್ತೆಯಾಗಿದೆ. |
![]() | ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನ ಮಂತ್ರಿ ಸಚಿವಾಲಯ ಪರಾಮರ್ಶೆ: ಬಿಎಫ್.7 ಹೊಸ ರೂಪಾಂತರಿ ಪತ್ತೆ ಮೇಲೆ ಗಮನದೇಶದಲ್ಲಿನ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಆರೋಗ್ಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ ಕೆ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ನಿನ್ನೆ ಉನ್ನತ ಮಟ್ಟದ ಸಭೆಯನ್ನು ನಡೆಸಿತು. |
![]() | ನ್ಯೂಯಾರ್ಕ್'ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ಹೊಸ ರೂಪಾಂತರಿ ಎಕ್ಸ್ಎಕ್ಸ್ಬಿ.1.5 ಭಾರತದಲ್ಲಿ ಪತ್ತೆ?ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಳಗೊಂಡಿದ್ದು, ಈ ನಡುವಲ್ಲೇ ನ್ಯೂಯಾರ್ಕ್ ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್'ನ ಎಕ್ಸ್ಎಕ್ಸ್ಬಿ.1.5 ಭಾರತದಲ್ಲಿ ಪತ್ತೆಯಾಗಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ. |
![]() | ಕೋವಿಡ್-19: ಚೀನಾದ ಮಾಹಿತಿ ಕೊರತೆಯಿಂದಲೇ ಇತರೆ ದೇಶಗಳಿಂದ ನಿರ್ಬಂಧ ಹೇರಿಕೆ: WHOಚೀನಾದ ಕೋವಿಡ್ -19 ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ ಕೆಲವು ದೇಶಗಳು ಪರಿಚಯಿಸಿರುವ ನಿರ್ಬಂಧಗಳು "ಅರ್ಥವಾಗಬಲ್ಲವು", ಬೀಜಿಂಗ್ನಿಂದ ಮಾಹಿತಿಯ ಕೊರತೆಯಾಗಿರುವುದೇ ಇದಕ್ಕೆ ಕಾರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. |
![]() | ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಇದರ ನಡುವೆಯೇ ದೇಶದಲ್ಲಿ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. |
![]() | ದೇಶಾದ್ಯಂತ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಪಾಸಿಟಿವ್, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮ್ಯಾನ್ಮಾರ್ನ 11 ಸೋಂಕಿತರಿಗೆ ಚಿಕಿತ್ಸೆಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್-19 ಮಹಾಮಾರಿ ವ್ಯಾಪಕವಾಗಿರುವಂತೆಯೇ ಇತ್ತ ದೇಶಾದ್ಯಂತ 39 ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮ್ಯಾನ್ಮಾರ್ನ 11 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. |
![]() | ಕೋವಿಡ್-19: ಮುಂದಿನ 40 ದಿನ ನಿರ್ಣಾಯಕ, ಜನವರಿಯಲ್ಲಿ ದೇಶದಲ್ಲಿ ಕೊರೊನಾ ಹೆಚ್ಚಳ ಸಾಧ್ಯತೆ: ಕೇಂದ್ರ ಸರ್ಕಾರಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ. |
![]() | ಕೋವಿಡ್-19 ರೂಪಾಂತರಿ ಭೀತಿ: ಬೆಂಗಳೂರು ಸೇರಿದಂತೆ ದೇಶಾದ್ಯಂತ ಇಂದು 'ಅಣಕು ಕಾರ್ಯಾಚರಣೆ', ಏನಿದು ಮಾಕ್ ಡ್ರಿಲ್?ನೆರೆಯ ಚೀನಾದಲ್ಲಿ ಕೋವಿಡ್ ಮಹಾಮಾರಿ ಮರಣ ಮೃದಂಗ ಭಾರಿಸುತ್ತಿರುವಂತೆಯೇ ಇತ್ತ ದೇಶದಲ್ಲಿ ಮತ್ತೆ ಮಾಹಾಮಾರಿ ಕೊರೊನಾ ಅಲೆ ಆತಂಕ ಆವರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣಾ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. |
![]() | ಕೋವಿಡ್ -19: ಹಾಸಿಗೆಗಳ ಲಭ್ಯತೆ ಕ್ರೋಢೀಕರಿಸಲು, ಹಾಸಿಗೆಗಳ ಲಭ್ಯತೆ ಹಂಚಿಕೊಳ್ಳುವಂತೆ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಸೂಚನೆದೇಶಾದ್ಯಂತ ಕೋವಿಡ್ ರೂಪಾಂತರಿ ತಳಿ BF.7 ಭೀತಿ ಆವರಿಸಿರುವಂತೆಯೇ ಇತ್ತ ಕೋವಿಡ್ ಸೋಂಕು ನಿರ್ವಹಣೆಗೆ ಸಕಲ ಸಿದ್ಧತೆ ನಡೆಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಸಿಗೆಗಳ ಲಭ್ಯತೆ ಕ್ರೋಢೀಕರಿಸಲು, ಹಾಸಿಗೆಗಳ ಲಭ್ಯತೆ ಹಂಚಿಕೊಳ್ಳುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. |
![]() | ಕೋವಿಡ್-19: BF.7 ರೂಪಾಂತರಿ ವೈರಸ್ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ: ರಾಜ್ಯ ಸರ್ಕಾರ ಘೋಷಣೆದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿರುವ ಒಮಿಕ್ರಾನ್ ಬಿಎಫ್.7 ರೂಪಾಂತರಿ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. |
![]() | ದೇಶದಲ್ಲಿ ಹೊಸ ಪ್ರಕರಣ ಸಂಖ್ಯೆಯಲ್ಲಿ ಇಂದೂ ಇಳಿಕೆ; ಏರಿಕೆಯಾಗುತ್ತಲೇ ಇರುವ ಕೋವಿಡ್ ರೂಪಾಂತರದ ಭೀತಿಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 157 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,421ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್ ವಿಷಯದಲ್ಲಿ ಭಾರತವನ್ನು ಚೀನಾಕ್ಕೆ ಹೋಲಿಕೆ ಮಾಡುವುದು ಬೇಡ, ಆತಂಕಪಡುವುದು ಬೇಡ, 12 ಮಂದಿಯಲ್ಲಿ ಪಾಸಿಟಿವ್: ಡಾ ಕೆ ಸುಧಾಕರ್ಓಮಿಕ್ರಾನ್ ವೈರಸ್ ಬಂದು ಒಂದು ವರ್ಷದ ಮೇಲಾಗಿದೆ, ಕೋವಿಡ್ ಬಂದಾಗ ಏನು ಮಾಡಬೇಕು, ಹೇಗಿರಬೇಕು ಎಂಬ ಅನುಭವ ನಮಗಾಗಿದೆ. ಹೀಗಾಗಿ ಪಾಸಿಟಿವ್ ಬಂದ ಕೂಡಲೇ ಜನರು ಆತಂಕಕ್ಕೊಳಗಾಗಬೇಕಾದ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು. |