social_icon
  • Tag results for PM Modi

'ಪ್ರಜಾಪ್ರಭುತ್ವದ ದೇಗುಲ' ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

published on : 28th May 2023

ನೂತನ ಸಂಸತ್ ಭವನ ಲೋಕಾರ್ಪಣೆ: ಕಟ್ಟಡ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರ ಸನ್ಮಾನಿಸಿದ ಪ್ರಧಾನಿ ಮೋದಿ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಸನ್ಮಾನ ಮಾಡಿದರು.

published on : 28th May 2023

ನೂತನ ಸಂಸತ್ ಕಟ್ಟಡದ ಸ್ಮರಣಾರ್ಥ 75 ರೂಪಾಯಿ ನಾಣ್ಯ, ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ನೂತನ ಸಂಸತ್ ಕಟ್ಟಡವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ್ದು, ಕಟ್ಟಡ ಉದ್ಘಾಟನೆ ಸ್ಮರಣಾರ್ಥ 75 ರೂಪಾಯಿ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಭಾನುವಾರ ಬಿಡುಗಡೆಗೊಳಿಸಿದ್ದಾರೆ.

published on : 28th May 2023

ನೂತನ ಸಂಸತ್ ಭವನ ಲೋಕಾರ್ಪಣೆ: ಸ್ಪೀಕರ್​ ಆಸನದ ಬಳಿ ಐತಿಹಾಸಿಕ 'ಸೆಂಗೋಲ್'​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ನೂತನ ಸಂಸತ್ ಭವನದ ಲೋಕಾರ್ಪಣೆ ಸಮಾರಂಭ ಭಾನುವಾರ ಆರಂಭಗೊಂಡಿದ್ದು, ಪುರೋಹಿತರಿಂದ ಸೆಂಗೋಲ್​​ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್​ ಆಸನದ ಬಳಿ​ ಪ್ರತಿಷ್ಠಾಪನೆ ಮಾಡಿದ್ದಾರೆ.

published on : 28th May 2023

ಸೆಂಗೋಲ್: ಇದು ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ: ಪ್ರಧಾನಿ ಮೋದಿ

ಸೆಂಗೋಲ್ ಕೇವಲ ಧರ್ಮದಂಡ ಮಾತ್ರವಲ್ಲ. ಸ್ವಾತಂತ್ರ್ಯದ ಸಂಕೇತ, ಗುಲಾಮಗಿರಿ ಅಂತ್ಯಗೊಳಿಸಿದ ಸಂಕೇತ ಎಂದು ಪ್ರಧಾನಿ ಮೋದಿ ಶನಿವಾರ ಹೇಳಿದ್ದಾರೆ.

published on : 27th May 2023

ನೂತನ ಸಂಸತ್ ಭವನ ಉದ್ಘಾಟನೆ: ಪ್ರಧಾನಿ ಮೋದಿಗೆ ‘ಸೆಂಗೋಲ್’ ರಾಜದಂಡ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ

ನೂತನ ಸಂಸತ್ ಭವನ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಅಧೀನಂ ಪೀಠಾಧಿಪತಿಗಳು ‘ಸೆಂಗೋಲ್’ (ರಾಜದಂಡ) ಹಸ್ತಾಂತರಿಸಿದರು.

published on : 27th May 2023

ಮುಂಬೈ: ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ, ಆರ್‌ಟಿಐ ಕಾರ್ಯಕರ್ತ ಬಂಧನ

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಮತ್ತಿತರರ ವಿರುದ್ಧ "ಅವಹೇಳನಕಾರಿ" ಹೇಳಿಕೆ ನೀಡಿದ ಆರೋಪದ ಮೇರೆಗೆ ಮಾಹಿತಿ ಹಕ್ಕು ಕಾರ್ಯಕರ್ತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

published on : 27th May 2023

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗ ಸಭೆ: ಕೇರಳ, ರಾಜಸ್ಥಾನ ಸೇರಿ 8 ರಾಜ್ಯಗಳ ಮುಖ್ಯಮಂತ್ರಿಗಳು ಗೈರು!

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗ ಸಮಿತಿ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್ ಸೇರಿದಂತೆ8 ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆಂದು ತಿಳಿದುಬಂದಿದೆ.

published on : 27th May 2023

ಜವಾಹರಲಾಲ್‌ ನೆಹರು ಪುಣ್ಯತಿಥಿ: ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಗಣ್ಯರಿಂದ ನಮನ

ಇಂದು ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ 59ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಾಂಧಿ ಸೇರಿದಂತೆ ಹಲವು ಗಣ್ಯರು ನಮನ ಸಲ್ಲಿಸಿದ್ದಾರೆ.

published on : 27th May 2023

ನೂತನ ಸಂಸತ್ ಭವನ: ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ  ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ. 

published on : 26th May 2023

ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಉತ್ತರಾಖಂಡ್ ರಾಜಧಾನಿ ಡೆಹ್ರಾಡೂನ್‌ ಮತ್ತು ರಾಷ್ಟ್ರ ರಾಜಧಾನಿ ದೆಹಲಿ ನಡುವೆ ಸಂಪರ್ಕ ಬೆಸೆಯುವ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದ್ದಾರೆ.

published on : 25th May 2023

ಸಂಸತ್ತನ್ನು ಸಾಂವಿಧಾನಿಕ ಮೌಲ್ಯಗಳ ಮೂಲಕ ನಿರ್ಮಿಸಲಾಗಿದೆ, ಅಹಂಕಾರದ ಇಟ್ಟಿಗೆಗಳಿಂದಲ್ಲ: ರಾಹುಲ್ ಗಾಂಧಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ನೂತನ ಕಟ್ಟಡ ಉದ್ಘಾಟಿಸದಿರುವುದು ಅಥವಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

published on : 24th May 2023

ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.

published on : 24th May 2023

ಅಮೇರಿಕಾ ಕಾಂಗ್ರೆಸ್ ಜಂಟಿ ಸೆಷನ್ ಗೆ ಪ್ರಧಾನಿ ಮೋದಿ ಗೆ ಆಹ್ವಾನ ನೀಡಲು ಒತ್ತಾಯ

ಅಮೇರಿಕಾದ ಜಂಟಿ ಕಾಂಗ್ರೆಸ್ ಅಧಿವೇಶಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲು ಪ್ರಭಾವಿ ಕಾಂಗ್ರೆಸ್ ನ ಭಾರತೀಯ ಸಮಿತಿಯ ಸಹ-ಅಧ್ಯಕ್ಷರು ಒತ್ತಾಯಿಸಿದ್ದಾರೆ.

published on : 24th May 2023

ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ, ಆಟೋಮೊಬೈಲ್ ಕ್ಷೇತ್ರದಲ್ಲಿ 3ನೇ ಸ್ಥಾನ: ಸಿಡ್ನಿಯಲ್ಲಿ ಪ್ರಧಾನಿ ಮೋದಿ

ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

published on : 23rd May 2023
 < 12 3 4 5 6 7 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9