- Tag results for Statue
![]() | ಪರಶುರಾಮ ಪ್ರತಿಮೆ ವಿವಾದ: ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿಕಾರ್ಕಳ ಕ್ಷೇತ್ರದ ಬೈಲೂರಿನ ಥೀಮ್ ಪಾರ್ಕ್ನಲ್ಲಿ ಅಪೂರ್ಣ ಪ್ರತಿಮೆ ಸ್ಥಾಪಿಸುವ ಮೂಲಕ ಪರಶುರಾಮ ದೇವರಿಗೆ ಅವಮಾನ ಮಾಡಲಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಂಗಳವಾರ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ರಾಜ್ಕುಮಾರ್ ಕುಟುಂಬ ಎಂದಿಗೂ ಕೆಟ್ಟದ್ದನ್ನು ಬಯಸಿಲ್ಲ: ಪುನೀತ್ ರಾಜ್ ಕುಮಾರ್ ಪ್ರತಿಮೆ ಅನಾವರಣ ಮಾಡಿದ ಸಿಎಂ ಸಿದ್ದರಾಮಯ್ಯಸ್ಯಾಂಡಲ್ ವುಡ್ ನ ಖ್ಯಾತ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಪುನೀತ್ ರಾಜ್ ಕುಮಾರ್ ಒಡೆತನದ ಪಿ.ಆರ್.ಕೆ. ಸ್ಟುಡಿಯೋಸ್ ಹಾಗೂ N3K ಡಿಸೈನ್ ಸ್ಟುಡಿಯೋ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಅವರ ಸಂಗ್ರಹಣೀಯ ಶಿಲ್ಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. |
![]() | ಜೋಹಾನ್ಸ್ಬರ್ಗ್ನ ಟಾಲ್ಸ್ಟಾಯ್ ಫಾರ್ಮ್ನಲ್ಲಿ ಮಹಾತ್ಮ ಗಾಂಧಿಯವರ ಎಂಟು ಅಡಿ ಎತ್ತರ ಪ್ರತಿಮೆ ಅನಾವರಣ!ಮಹಾತ್ಮಾ ಗಾಂಧಿಯವರು 20 ನೇ ಶತಮಾನದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಕೀಲರಾಗಿದ್ದ ಸಮಯದಲ್ಲಿ ಅವರು ಪ್ರಾರಂಭಿಸಿದ ಟಾಲ್ಸ್ಟಾಯ್ ಫಾರ್ಮ್ನಲ್ಲಿ ಎಂಟು ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. |
![]() | ಆದಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ: ನಾಳೆ ಸಿಎಂ ಚೌಹಾಣ್ ಅವರಿಂದ ಅನಾವರಣಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಶಿವನಿಗೆ ಸಮರ್ಪಿತವಾದ 12 ಜ್ಯೋತಿರ್ಲಿಂಗಗಳಲ್ಲಿ ಒಂದನ್ನು ಹೊಂದಿರುವ ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಹಿಂದೂ ಸಂತ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. |
![]() | ರಾಜ್ಘಾಟ್ನಲ್ಲಿ 12 ಅಡಿ ಎತ್ತರದ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ ಮುರ್ಮುರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು. |
![]() | ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ! ಸಿಎಂ ಸಿದ್ದರಾಮಯ್ಯ ಖಂಡನೆಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ. |
![]() | ಶಾಸಕರ ಕ್ಷೇತ್ರಾಭಿವೃದ್ಧಿಗೆ ಹಣವಿಲ್ಲ, ರಾಜೀವ್ ಗಾಂಧಿ ಕಂಚಿನ ಪ್ರತಿಮೆಗೆ 1.05 ಕೋಟಿ ರೂ. ಅನುದಾನ; ಚರ್ಚೆಗೆ ಗ್ರಾಸ!1.05 ಕೋಟಿ ರೂ. ವೆಚ್ಚದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿರುವುದು ಪಕ್ಷದೊಳಗಡೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. |
![]() | ಹರಿಯಾಣ: ಗ್ರಾಮವೊಂದರಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ, ಎಫ್ಐಆರ್ ದಾಖಲುಗ್ರಾಮವೊಂದರಲ್ಲಿ ಕೆಲವು ಕಿಡಿಗೇಡಿಗಳು ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೋಮವಾರ ರಾತ್ರಿ ಭಟ್ಲ ಗ್ರಾಮದ ಡಾ. ಅಂಬೇಡ್ಕರ್ ಪಾರ್ಕ್ನಲ್ಲಿರುವ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಅವರು ಹೇಳಿದರು. |
![]() | ಪ್ರತಿಭಟನೆ ನಂತರ ಶಿವಾಜಿ ಪ್ರತಿಮೆ ತೆರವು ಆದೇಶ ಹಿಂಪಡೆದ ಗೋವಾ ಪಂಚಾಯತ್ತೀವ್ರ ಪ್ರತಿಭಟನೆಯ ನಂತರ ರಸ್ತೆಬದಿಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ತೆರವುಗೊಳಿಸುವಂತೆ ಗೋವಾದ ಕಲಂಗುಟ್ ಪಂಚಾಯತ್ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಹಿಂಪಡೆಯಲಾಗಿದೆ. |
![]() | ಬೆಳಗಾವಿಯಲ್ಲಿ 11ನೇ ಶತಮಾನದ ತೀರ್ಥಂಕರರ ಪ್ರತಿಮೆ ಪತ್ತೆ!ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ 11ನೇ ಶತಮಾನದ ಜೈನ ತೀರ್ಥಂಕರ ಶ್ರೀ ಪಾರ್ಶ್ವನಾಥರ ಮೂರ್ತಿ ಪತ್ತೆಯಾಗಿದೆ. ಹೆಬ್ಬಾಳ ಗ್ರಾಮದ ಜೈನ ಮಂದಿರದ ಬಳಿ ಅಡಿಪಾಯ ಕಾಮಗಾರಿ ನಡೆಯುತ್ತಿರುವಾಗ ಈ ಪ್ರತಿಮೆ ಪತ್ತೆಯಾಗಿದೆ |
![]() | ವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು. |
![]() | ವಿಧಾನಸೌಧದ ಎದುರು ಬಸವಣ್ಣ, ಕೆಂಪೇಗೌಡರ ಅಶ್ವಾರೋಹಿ ಪ್ರತಿಮೆ ಸ್ಥಾಪನೆ: ಅಮಿತ್ ಶಾ ರಿಂದ ಇಂದು ಅನಾವರಣ, ಮದುವಣಗಿತ್ತಿಯಂತೆ ಸಜ್ಜುಗೊಂಡ ಶಕ್ತಿ ಕೇಂದ್ರವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ.26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ. |
![]() | ಬಸವಕಲ್ಯಾಣದ ಗೊರ್ಟ ಗ್ರಾಮದಲ್ಲಿ ಇಂದು ಸರ್ದಾರ್ ಪಟೇಲ್ ವಲ್ಲಭಬಾಯಿ ಪಟೇಲ್ ಪ್ರತಿಮೆ ಅಮಿತ್ ಶಾರಿಂದ ಅನಾವರಣಬಸವಕಲ್ಯಾಣ ಪಟ್ಟಣದ ಸಮೀಪದ ಹುಲಸೂರ ತಾಲೂಕಿನ ಗೋರ್ಟಾ (ಬಿ) ಗ್ರಾಮದಲ್ಲಿ ಇಂದು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಮಹತ್ವವಾಗಿದೆ. |
![]() | ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆ: ಸಿಎಂ ಬೊಮ್ಮಾಯಿ ಅನಾವರಣಮಹದೇಶ್ವರ ಬೆಟ್ಟದಲ್ಲಿ ನಿರ್ಮಾಣವಾಗಿರುವ ನೂತನ 108 ಅಡಿ ಎತ್ತರದ ಮಲೈ ಮಹದೇಶ್ವರ ಸ್ವಾಮಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಅವರು ಬೆಳ್ಳಿ ರಥ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು. |