social_icon
  • Tag results for Tamil Nadu

ಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್

ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

published on : 1st June 2023

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ; ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು

ಮೇಕೆದಾಟು ವಿಚಾರವಾಗಿ ಆಕ್ರಮಣಕಾರಿ ವರ್ತನೆ ಬೇಡ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಕಿವಿಮಾತು ಹೇಳಿದೆ.

published on : 1st June 2023

ತಮಿಳುನಾಡಿನಲ್ಲಿ ಹಾಲು ಸಂಗ್ರಹಣೆ ನಿಲ್ಲಿಸುವಂತೆ ಅಮುಲ್‌ಗೆ ನಿರ್ದೇಶಿಸಿ: ಅಮಿತ್‌ ಶಾಗೆ ಸಿಎಂ ಸ್ಟಾಲಿನ್‌ ಪತ್ರ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಜರಾತ್ ಮೂಲದ ಡೈರಿ ಅಮುಲ್‌ಗೆ ದಕ್ಷಿಣ ರಾಜ್ಯದಿಂದ ಹಾಲು ಸಂಗ್ರಹಿಸುವುದನ್ನು ನಿಲ್ಲಿಸುವಂತೆ ನಿರ್ದೇಶಿಸಬೇಕೆಂದು ಒತ್ತಾಯಿಸಿದ್ದಾರೆ.

published on : 25th May 2023

ನೂತನ ಸಂಸತ್ತು ಭವನ ಉದ್ಘಾಟನೆ, ತಮಿಳು ನಾಡಿನ 20 ಮಂದಿ ಅರ್ಚಕರಿಂದ ಧಾರ್ಮಿಕ ವಿಧಿವಿಧಾನ

ಇದೇ ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಗೆ ತಮಿಳುನಾಡಿನಿಂದ 20 ಮಂದಿ ಅರ್ಚಕರನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬ್ರಿಟಿಷರಿಂದ 1947ರಲ್ಲಿ ಅಧಿಕಾರ ಹಸ್ತಾಂತರದ ಪ್ರತೀಕವಾಗಿದ್ದ ಸೆಂಗೋಲ್ ನ್ನು ಅಂದು ಸ್ಥಾಪಿಸಲಾಗುವುದು ಎಂದು ಹೇಳಿದರು. 

published on : 25th May 2023

ನೂತನ ಸಂಸತ್ ಭವನದಲ್ಲಿ ತಮಿಳುನಾಡಿನ ಐತಿಹಾಸಿಕ 'ಸೆಂಗೋಲ್' ಸ್ಥಾಪನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಬ್ರಿಟೀಷರಿಂದ ಅಧಿಕಾರ ಹಸ್ತಾಂತರವನ್ನು ಪ್ರತಿನಿಧಿಸಲು ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರು ಸ್ವೀಕರಿಸಿದ್ದ ತಮಿಳುನಾಡಿನ ಐತಿಹಾಸಿಕ ರಾಜದಂಡವಾದ 'ಸೆಂಗೊಲ್' ಅನ್ನು ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಹೇಳಿದ್ದಾರೆ.

published on : 24th May 2023

ಆನೇಕಲ್: ನಂಬರ್ ಬೋರ್ಡ್ ಇಲ್ಲದೆ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು

ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ.

published on : 22nd May 2023

5 ಗ್ಯಾರಂಟಿ ಜಾರಿಗೆ ಹಣದ ಮೂಲ ತಿಳಿಸಿ: ರಾಜ್ಯ ಕಾಂಗ್ರೆಸ್'ಗೆ ಅಣ್ಣಾಮಲೈ ಆಗ್ರಹ

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ ಅವರು ಅಭಿನಂದನೆಗಳನ್ನು ತಿಳಿಸಿದ್ದು, 5 ಗ್ಯಾರಂಟಿಗಳ ಜಾರಿಗೆ ಹಣದ ಮೂಲ ತಿಳಿಸುವಂತೆ ಆಗ್ರಹಿಸಿದ್ದಾರೆ.

published on : 21st May 2023

ಮೇಕೆದಾಟು ಅಣೆಕಟ್ಟು ಯೋಜನೆ: ಕರ್ನಾಟಕ- ತಮಿಳುನಾಡು ಸಂಬಂಧ ಹದಗೆಡುವ ಸಾಧ್ಯತೆ

ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಕಾವೇರಿ ನದಿಯ ಮೇಕೆದಾಟು ಅಣೆಕಟ್ಟು ವಿವಾದ ತಮಿಳುನಾಡಿಗೆ ದೊಡ್ಡ ತಲೆನೋವಾಗುವ ಸಾಧ್ಯತೆಯಿದೆ.

published on : 20th May 2023

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ಗೆ ಆಹ್ವಾನ

ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

published on : 18th May 2023

ಕಳ್ಳಬಟ್ಟಿ ದುರಂತ: ತಮಿಳುನಾಡಿನ ಮೂರು ಗ್ರಾಮಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ, 7 ಪೊಲೀಸರ ಅಮಾನತು

ಮರಕ್ಕನಂ ಮತ್ತು ಮಧುರಾಂತಕಂನಲ್ಲಿ ಕಳ್ಳಬಟ್ಟಿ ಸೇವಿಸಿ ವೃದ್ಧ ಮಹಿಳೆ ಸೇರಿದಂತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮರಕ್ಕನಂನಲ್ಲಿ ಆರು ಮಂದಿ ಮೃತಪಟ್ಟರೆ, ಮಧುರಾಂತಕಂನಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 

published on : 15th May 2023

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲು

ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

published on : 14th May 2023

ಸ್ಟಾಲಿನ್ ಸಂಪುಟ ಪುನರ್ರಚನೆ: ಪಿಟಿಆರ್ ಗೆ ಐಟಿ, ತಂಗಂ ತೆನ್ನರಸು ನೂತನ ಹಣಕಾಸು ಸಚಿವ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಗುರುವಾರ ತಮ್ಮ ಸಂಪುಟವನ್ನು ಪುನಾ ರಚನೆ ಮಾಡಿದ್ದು, ಸಚಿವ ಪಳನಿವೇಲ್ ತ್ಯಾಗ ರಾಜನ್(ಪಿಟಿಆರ್) ಅವರ ಬಳಿ ಇದ್ದ ಹಣಕಾಸು ಖಾತೆಯನ್ನು ಹಿಂಪಡೆದು, ತಂಗಂ ತೆನ್ನರಸು ಅವರನ್ನು ಹೊಸ...

published on : 11th May 2023

ತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತು

ಕುಖ್ಯಾತ ಗ್ಯಾಂಗ್‌ಸ್ಟರ್ ತಿಲ್ಲು ತಾಜ್‌ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್‌ಎಸ್‌ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

published on : 8th May 2023

ಪೆನ್ನಯಾರ್ ನದಿ ವಿವಾದ: 4 ವಾರಗಳಲ್ಲಿ ನ್ಯಾಯಮಂಡಳಿ ರಚಿಸಿ ವಿವಾದ ಬಗೆಹರಿಸಲು ಕೇಂದ್ರಕ್ಕೆ 'ಸುಪ್ರೀಂ' ಸೂಚನೆ

ತಮಿಳುನಾಡು-ಕರ್ನಾಟಕ ನಡುವಿನ ಪೆನ್ನಯಾರ್ ನದಿ ವಿವಾದವನ್ನು ಬಗೆಹರಿಸಲು ಅಂತಾರಾಜ್ಯ ನದಿ ನೀರು ವಿವಾದಗಳ ನ್ಯಾಯಾಧಿಕರಣವನ್ನು ರಚಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಪ್ರಕರಣವನ್ನು ನ್ಯಾಯಮೂರ್ತಿ ಎಂಆರ್ ಶಾ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಇಡಲಾಗಿದೆ.

published on : 3rd May 2023

ಕೇಂದ್ರದ ಎಲ್ಲಾ ಪರೀಕ್ಷೆಗಳು ಪ್ರಾದೇಶಿಕ ಭಾಷೆಯಲ್ಲಿ ನಡೆಸುವಂತೆ ತಮಿಳುನಾಡು ಸಿಎಂ ಆಗ್ರಹ

ಕೇಂದ್ರ ಸರ್ಕಾರದ ಎಲ್ಲ ಪರೀಕ್ಷೆಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಒತ್ತಾಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು, ದೇಶದ ಎಲ್ಲ ರಾಜ್ಯಗಳ ವಿದ್ಯಾರ್ಥಿಗಳಿಗೆ ಸಮಾನ ಅವಕಾಶ ಸಿಗಬೇಕು ಎಂದು...

published on : 2nd May 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9