- Tag results for Villagers
![]() | ತಿ.ನರಸಿಪುರ ರಸ್ತೆ ಅಪಘಾತದಲ್ಲಿ ರೈತ ಸಾವು: ಹೆದ್ದಾರಿ ತಡೆದು ಗ್ರಾಮಸ್ಥರಿಂದ ಪ್ರತಿಭಟನೆತಿ. ನರಸಿಪುರ ಕೊಳ್ಳೆಗಾಲ ಹೆದ್ದಾರಿಯಲ್ಲಿ 78 ವರ್ಷದ ರೈತ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರಣ ಅಲ್ಲಿನ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. |
![]() | ಮಹಾರಾಷ್ಟ್ರ: ಹುಲಿ ದಾಳಿಗೆ ವ್ಯಕ್ತಿ ಬಲಿ; ಅರಣ್ಯ ಸಿಬ್ಬಂದಿಗಳ ಮೇಲೆ ಗ್ರಾಮಸ್ಥರ ದಾಳಿಹುಲಿ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕೆಂಡಾಮಂಡಲಗೊಂಡ ಗ್ರಾಮಸ್ಥರು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿರುವ ಘಟನೆಯೊದಂದು ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. |
![]() | Cyclone Biparjoy: ಮನೆ ತೊರೆಯಲು ಕಚ್ ಗ್ರಾಮಸ್ಥರ ಹಿಂದೇಟು; ಅಧಿಕಾರಿಗಳಿಗೆ ಸವಾಲಾದ ಸ್ಥಳಾಂತರ ಕಾರ್ಯ!ಬೈಪರ್ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಕಚ್ ಜಿಲ್ಲೆಯ ಕರಾವಳಿ ಗ್ರಾಮಗಳಿಂದ ನೂರಾರು ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ಅನೇಕ ಗ್ರಾಮಸ್ಥರು ತಮ್ಮ ಜಾನುವಾರು ಮತ್ತು ಸಾಮಾನುಗಳನ್ನು ಬಿಡಲು ಹಿಂಜರಿಯುತ್ತಿರುವುದರಿಂದ ಅಧಿಕಾರಿಗಳು ಸವಾಲನ್ನು ಎದುರಿಸುತ್ತಿದ್ದಾರೆ. |
![]() | ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. |
![]() | ಏಕೈಕ ಸೇತುವೆ ಉಳಿಸಲು ಸಿದ್ದಾಪುರದ ಅಣಲೆಬೈಲು ಗ್ರಾಮಸ್ಥರ ಹೋರಾಟ!ಕನಿಷ್ಠ 6 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ಸೇತುವೆಯನ್ನು ಉಳಿಸಲು ಅಣಲೆಬೈಲ್ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. 2020ರಿಂದ ಸೇತುವೆಯ ಪಿಲ್ಲರ್ಗಳ ಸುತ್ತಲೂ ಮರಳಿನ ಚೀಲಗಳನ್ನು ಹಾಕಿ ಅದನ್ನು ಉಳಿಸಲು ಹೆಣಗಾಡುತ್ತಿದ್ದಾರೆ. |
![]() | ಕಾಂಗ್ರೆಸ್ ಸರ್ಕಾರ ಬರ್ತಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ: ಬೆಸ್ಕಾಂ ಸಿಬ್ಬಂದಿ ಮುಂದೆ ಪಟ್ಟುಹಿಡಿದ ಗ್ರಾಮಸ್ಥರು!ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅದರಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೂಡ ಒಂದು. ಈಗ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ಗೆ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ. |
![]() | 'ನಿಮ್ಮ ಭಿಕ್ಷೆ ಯಾರಿಗೆ ಬೇಕು, ನಾವು ಬಿಜೆಪಿಗೆ ಓಟು ಹಾಕೋದಿಲ್ಲ': ಉಡುಗೊರೆಯನ್ನು ಸಿಟ್ಟಿನಿಂದ ಎಸೆದು ಹೋದ ಕೆ ಆರ್ ಪೇಟೆ ಗ್ರಾಮಸ್ಥರು!ಸೀರೆ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಯತ್ನಿಸಿದ್ದಕ್ಕೆ ಗ್ರಾಮಸ್ಥರು ಅದನ್ನು ಹಿಂತಿರುಗಿಸಿ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ನಡೆದಿದೆ. |
![]() | 'ನಮ್ಮಲ್ಲಿ ಏನೂ ಕೆಲಸ ಮಾಡಿಲ್ಲ, ಈಗ ಯಾಕೆ ಬರುತ್ತೀರಿ': ಸಚಿವೆ ಶಶಿಕಲಾ ಜೊಲ್ಲೆಗೆ ಚಿಕ್ಕೋಡಿ ತಾಲ್ಲೂಕಿನ ಗಲಟಗಾ ಗ್ರಾಮಸ್ಥರ ಘೇರಾವ್!ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಭಾರೀ ಮುಜುಗರವೆಂಬಂತಹ ಘಟನೆ ನಡೆದಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಆರೋಪಿಸಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಗ್ರಾಮಕ್ಕೆ ಪ್ರವೇಶಿಸದಂತೆ ಸ್ಥಳೀಯರು ತಡೆಹಿಡಿದಿರುವ ಘಟನೆ ನಡೆದಿದೆ. |
![]() | ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. |
![]() | ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. |
![]() | ಇಬ್ಬರನ್ನು ಕೊಂದಿದ್ದ ಕಾಡಾನೆ ಸೆರೆ ಹಿಡಿದ ಅರಣ್ಯಾಧಿಕಾರಿಗಳ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟಈ ಹಿಂದೆ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಮಗೆ ತೊಂದರೆ ನೀಡುತ್ತಿರುವ ಇತರ ಆನೆಗಳನ್ನು ಸಹ ಅಧಿಕಾರಿಗಳು ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಕಲಿಯುಗದ ಸಂಜೀವಿನಿ ಕಪ್ಪತ್ತಗುಡ್ಡಕ್ಕೆ ಮೂಡನಂಬಿಕೆಯಿಂದ ಎದುರಾಗುತ್ತಿದೆ ಆಪತ್ತು!ಉತ್ತರ ಕರ್ನಾಟಕದ ಸಹ್ಯಾದ್ರಿ. ಕಲಿಯುಗದ ಸಂಜೀವಿನಿ ಎಂದೇ ಖ್ಯಾತಿಗಳಿಸಿರುವ ಕಪ್ಪತ್ತಗುಡ್ಡಕ್ಕೆ ಜನರ ಮೂಢನಂಬಿಕೆಯಿಂದ ಆಪತ್ತು ಎದುರಾಗಿದೆ. |
![]() | ಪಟ್ಟಭದ್ರ ಹಿತಾಸಕ್ತಿಯಿಂದ ಚೆಕ್ ಡ್ಯಾಂ ನಿರ್ಮಾಣ: ಚಿಕ್ಲಿಹೊಳೆ ಯೋಜನೆಗೆ ಕೊಡಗು ಗ್ರಾಮಸ್ಥರ ವಿರೋಧಸಣ್ಣ ನೀರಾವರಿ ಇಲಾಖೆ ಕೈಗೆತ್ತಿಕೊಂಡಿರುವ ಕೊಡಗಿನ ಚಿಕ್ಲಿಹೊಳೆ ಹೊಳೆಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಚೆಕ್ ಡ್ಯಾಂ ಕಾಮಗಾರಿಗೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. |