- Tag results for assembly
![]() | ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕಣದಲ್ಲಿರುವ ಪ್ರಮುಖರು ಯಾರ್ಯಾರು?ಮೊನ್ನೆ ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಶನಿವಾರ ಬೆಳಗ್ಗೆ ಬಿಡುಗಡೆಯಾಗಿದೆ. |
![]() | ವಿಧಾನಸಭೆ ಚುನಾವಣೆ 2023: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕೆಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆ-2023ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. |
![]() | ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳ ಬೆಂಬಲಿಸದಿರಲು ತಂಝೀಮ್ ನಿರ್ಣಯ, ಮಹಿಳೆಯರಿಂದ ಪ್ರತಿಭಟನೆಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸದೇ ಜಾತ್ಯತೀತ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಭಟ್ಕಳ ತಂಝೀಮ್ ನಿರ್ಣಯ ಕೈಗೊಂಡಿದೆ ಎಂದು ತಿಳಿದುಬಂದಿದೆ. |
![]() | ವಿಧಾನಸಭೆ ಚುನಾವಣೆ: ಸಣ್ಣ ಸಮುದಾಯಗಳನ್ನು ಓಲೈಸಲು ಅಭಿವೃದ್ಧಿ ನಿಗಮಗಳು ಸ್ಥಾಪನೆ; ಹಣವಿಲ್ಲದಿದ್ದರೂ ಹೊಸ ಹೊಸ ಘೋಷಣೆ!ವಿಧಾನಸಭಾ ಚುನಾವಣೆಗೆ ಮುನ್ನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರವು ನಿರ್ದಿಷ್ಟ ಜಾತಿಗಳು ಮತ್ತು ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಣ್ಣ ಸಮುದಾಯಗಳ ಸದಸ್ಯರನ್ನು ಓಲೈಸಲು ಹಲವಾರು ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸುತ್ತಿದೆ. |
![]() | ಮತಕ್ಕಾಗಿ ಆಮಿಷ ಒಡ್ಡುವವರ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಮುಂದು; 'ಕಂಟ್ರೋಲ್ ರೂಮ್' ಸ್ಥಾಪನೆ!ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ರಾಜಕೀಯ ನಾಯಕರು ಮತಕ್ಕಾಗಿ ಹಣ, ಉಡುಗೊರೆಯ ಆಮಿಷಗಳ ಒಡ್ಡುವಂತಹ ಬೆಳವಣಿಗೆಗಳು ಕಂಡು ಬರುತ್ತಿವೆ. ಇಂತಹ ಆಮಿಷಗಳ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದ್ದು, ದೂರುಗಳ ಸ್ವೀಕರಿಸಲು ನಿಯಂತ್ರಣ ಕೊಠಡಿಯನ್ನು ತೆರೆದಿದೆ. |
![]() | ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ: ಪರಮೇಶ್ವರ್ -ಮುನಿಯಪ್ಪ ಬೆಂಬಲಿಗರ ಭಿನ್ನಮತ; ದೇವನಹಳ್ಳಿ ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜೀನಾಮೆ!ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಲು ವಿಳಂಬವಾಗಿರುವುದರ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರ ಬೆಂಬಲಿಗರ ನಡುವೆ ಭಿನ್ನಾಭಿಪ್ರಾಯಗಳು ಮುನ್ನೆಲೆಗೆ ಬಂದಿವೆ. |
![]() | ರೇವಣ್ಣಗೆ ಭವಾನಿ ಚಿಂತೆ, ಕುಮಾರಣ್ಣನಿಗೆ ನಿಖಿಲ್ ಚಿಂತೆ, ಭಾಗ್ಯವಿಧಾತ ಸಿದ್ದರಾಮಯ್ಯಗೆ ಕ್ಷೇತ್ರದ್ದೇ ಚಿಂತೆ: ಪ್ರತಾಪ್ ಸಿಂಹ ವ್ಯಂಗ್ಯಅನ್ನಭಾಗ್ಯ, ಶಾದಿ ಭಾಗ್ಯ, ಕ್ಷೀರಭಾಗ್ಯ ಮುಂತಾದ ಭಾಗ್ಯಗಳನ್ನು ಕೊಟ್ಟ ಸಿದ್ದರಾಮ್ಯನವರಿಗೆ ಕ್ಷೇತ್ರ ಭಾಗ್ಯವೇ ಇಲ್ಲ. ಅವರು ಕ್ಷೇತ್ರವನ್ನು ಹುಡುಕುವ ದುಃಸ್ಥಿತಿ ಬಂದಿದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. |
![]() | ಸಿದ್ದರಾಮಯ್ಯ, ನಾನು ಸ್ವಾರ್ಥಕ್ಕಾಗಿ ಕ್ಷೇತ್ರ ಬಿಡಲಿಲ್ಲ, ‘ಪಾಪ್ಯುಲರ್ ಅಭ್ಯರ್ಥಿ ಬೇರೆ ಬೇರೆ ಕಡೆ ನಿಲ್ಲಬೇಕಾಗುತ್ತೆ': ಶ್ರೀರಾಮುಲುಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕ್ಷೇತ್ರ ಆಯ್ಕೆಯ ಗೊಂದಲ ಮುಂದುವರಿದಿರುವಂತೆ ಬಳ್ಳಾರಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ಶ್ರೀರಾಮುಲು ಅವರ ಬಗ್ಗೆ ಮೃದು ಧೋರಣೆ ತಳೆದು ಮಾತನಾಡಿದ್ದಾರೆ. |
![]() | ನಗರಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಮುಂದು!ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಬೂತ್ಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವತ್ತ ಚುನಾವಣಾ ಆಯೋಗ ವಿಶೇಷ ಗಮನ ಹರಿಸಿದೆ. |
![]() | ಪ್ರಚಾರದ ವೇಳೆ ಜನರಿಗೆ ಉಡುಗೊರೆ ನೀಡುವ ಬದಲು ಆರೋಗ್ಯ ತಪಾಸಣೆಗಳ ನಡೆಸಿ: ರಾಜಕೀಯ ನಾಯಕರಿಗೆ ತಜ್ಞರ ಸಲಹೆಚುನಾವಣಾ ಹೊಸ್ತಿಲಿನಲ್ಲಿರುವ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ನಾಯಕರು, ಜನರಿಗೆ ಉಡುಗೊರೆಗಳ ನೀಡುವ ಬದಲು ಹೃದ್ರೋಗ, ಮಧುಮೇಹ ಮತ್ತು ನೆಫ್ರಾಲಜಿ ಕ್ಷೇತ್ರದ ಆರೋಗ್ಯ ವೃತ್ತಿಪರರೊಂದಿಗೆ ಉಚಿತ ಆರೋಗ್ಯ ತಪಾಸಣೆಗಳ ನಡೆಸಿ ಎಂದು ರಾಜಕೀಯ ನಾಯಕರಿಗೆ ತಜ್ಞರು ಸಲಹೆ ನೀಡಿದ್ದಾರೆ. |
![]() | ಚುನಾವಣಾ ಗುರುತು ಚೀಟಿಯಿಂದ ಹೆಸರು ಅಳಿಸಿದ ಆರೋಪ: ಆಕ್ಷೇಪಣೆಗೆ ನಿಗದಿತ ಸ್ಥಳಗಳಲ್ಲಿ ವಾರದವರೆಗೆ ಅಧಿಕಾರಿಗಳು ಲಭ್ಯಶಿವಾಜಿನಗರ, ರಾಜರಾಜೇಶ್ವರಿ ನಗರ ಮತ್ತು ಶಾಂತಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರನ್ನು ಅಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಆಕ್ಷೇಪಣೆಗಳನ್ನು ಸ್ವೀಕರಿಸಲು, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಈ ಪ್ರದೇಶಗಳಲ್ಲಿ ನಿಗದಿತ ಸ್ಥಳವನ್ನು ಏರ್ಪಡಿಸಿದ್ದು, ಅಲ್ಲಿ ಕೆಲಸದ ಸಮಯದಲ್ಲಿ ಏಳು ದಿನಗಳವರೆಗೆ ಅಧಿಕಾರಿ ಲಭ್ಯವಿರುತ್ತಾರೆ.ಮತದಾರರು ತಮ್ಮ ಚುನಾವಣಾ ಗುರುತು ಚ |
![]() | ಮಾ. 25ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕೆ.ಆರ್.ಪುರ-ವೈಟ್ಫೀಲ್ಡ್ ಮೆಟ್ರೋಗೆ ಚಾಲನೆ, ದಾವಣಗೆರೆ ರ್ಯಾಲಿಯಲ್ಲಿ ಭಾಗಿಮಾರ್ಚ್ 25 ರಂದು ಬೆಂಗಳೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ವೇಳೆ ಕೆ.ಆರ್.ಪುರ-ವೈಟ್ಫೀಲ್ಡ್ ಮೆಟ್ರೋಗೆ ಚಾಲನೆ ನೀಡಿ, ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. |
![]() | ಸಿದ್ದರಾಮಯ್ಯ ಸ್ಪರ್ಧೆಗೆ 'ಕೋಲಾರ' ಗೊಂದಲ: ಕಾಂಗ್ರೆಸ್ ಗೆ ಪರಿಹಾರಕ್ಕಿಂತ ಸಮಸ್ಯೆಯೇ ಹೆಚ್ಚು!ಕೋಲಾರದಲ್ಲಿ ಸಂಭವನೀಯ ಸೋಲು ತಪ್ಪಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಹೈಕಮಾಂಡ್ ಮಾಡಿರುವ ತಂತ್ರವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಹಳೆಯ ಪಕ್ಷಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕಿಂತ ಹೆಚ್ಚಿನ ತೊಂದರೆಯನ್ನುಂಟು ಮಾಡಿದೆ. |
![]() | ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮುಂದಿನ 5 ದಿನಗಳಲ್ಲಿ 2 ಬಾರಿ ರಾಜ್ಯಕ್ಕೆ ಅಮಿತ್ ಶಾ ಭೇಟಿರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಾಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ಚುನಾವಣಾ ಪ್ರಚಾರ ವೇಗ ಪಡೆದುಕೊಳ್ಳುತ್ತಿದೆ. |
![]() | ಚನ್ನಪಟ್ಟಣದಲ್ಲಿ ನಟಿ ರಮ್ಯಾ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳಲ್ಲ: ಹೆಚ್ಡಿ ಕುಮಾರಸ್ವಾಮಿಚಿತ್ರ ನಟಿ ರಮ್ಯಾ ಅವರು ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ. |