- Tag results for guarantees
![]() | ತೆಲಂಗಾಣ: ಕಾಂಗ್ರೆಸ್ನ 6 ಗ್ಯಾರಂಟಿಗಳ ಪೈಕಿ 2 ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ ರೇವಂತ್ ರೆಡ್ಡಿ!ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನಾ ಕಾಂಗ್ರೆಸ್ ಘೋಷಿಸಿದ್ದ ಆರು ಗ್ಯಾರಂಟಿ ಯೋಜನೆಗಳ ಪೈಕಿ 2ಕ್ಕೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಶನಿವಾರ ಚಾಲನೆ ನೀಡಿದರು. |
![]() | ಬೆಳಗಾವಿ ಅಧಿವೇಶನ: ಚುನಾವಣೆ ಗೆಲುವಿನ ಹುಮ್ಮಸ್ಸಿನಲ್ಲಿ ಕಲಾಪಕ್ಕೆ ಬಿಜೆಪಿ ಸಜ್ಜು, ಗ್ಯಾರಂಟಿ ವಿಚಾರ ಹಿಡಿದು ಹರಿಹಾಯುವ ಸಾಧ್ಯತೆಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ರಾಜ್ಯ ವಿಧಾನಮಂಡಲದ 10 ದಿನಗಳ ಚಳಿಗಾಲದ ಅಧಿವೇಶನವು ಗ್ಯಾರಂಟಿ ವಿಚಾರ ಸೇರಿ ಹಲವು ವಿಷಯಗಳು ಮತ್ತು ವಿವಾದಗಳ ಬಗ್ಗೆ ಆಸಕ್ತಿದಾಯಕ ಚರ್ಚೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಗಳಿವೆ. |
![]() | ಖಾತರಿ ಯೋಜನೆಗಳ ಅನುಷ್ಠಾನ ವಿಫಲ; ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆಮೂರು ರಾಜ್ಯಗಳಲ್ಲಿ ಬಿಜೆಪಿಯ ಅಮೋಘ ಗೆಲುವು ಪಕ್ಷದ ರಾಜ್ಯ ಘಟಕಕ್ಕೆ ಬಹುದೊಡ್ಡ ಸ್ಥೈರ್ಯವನ್ನು ನೀಡಿದೆ. ಇದೀಗ, ಆಡಳಿತಾರೂಢ ಕಾಂಗ್ರೆಸ್ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಕೇಸರಿ ಪಕ್ಷವು ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಭರವಸೆಗಳನ್ನು ಈಡೇರಿಸಿಲ್ಲ ಎಂಬ ಕೆಟಿಆರ್ ಹೇಳಿಕೆ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯಕರ್ನಾಟಕ ಸರ್ಕಾರ ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಭಾರತ ರಾಷ್ಟ್ರ ಸಮಿತಿಯ (ಬಿಆರ್ಎಸ್) ಕಾರ್ಯಾಧ್ಯಕ್ಷ ಕೆಟಿಆರ್ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ತಿರಸ್ಕರಿಸಿದ್ದಾರೆ. ನಾವು 5 ಭರವಸೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದೆವು ಮತ್ತು ಮೊದಲು ಸಂಪುಟ ಸಭೆಯಲ್ಲೇ ಆದೇಶಗಳನ್ನು ಹೊರಡಿಸಿದ್ದೇವೆ ಎಂದು ಹೇಳಿದರು. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣಾ ಗ್ಯಾರಂಟಿಗಳನ್ನು ಜಾರಿಗೊಳಿಸಿಲ್ಲ, 'ಸುಳ್ಳು ಭರವಸೆ' ಬಗ್ಗೆ ಎಚ್ಚರದಿಂದಿರಿ: ಜೆಪಿ ನಡ್ಡಾಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್ಎಸ್ ಎರಡೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ ಎಂದು ಗುರುವಾರ ದೂರಿದ್ದಾರೆ. |
![]() | ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳು ರದ್ದು: ಡಿಸಿಎಂ ಡಿಕೆ ಶಿವಕುಮಾರ್ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತಿವೆ ಎಂದು ಭಾನುವಾರ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಥವಾ ಅದರ ಮಿತ್ರ ಪಕ್ಷ ಜೆಡಿಎಸ್ಗೆ ಜನರು ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಿದ್ದಾರೆ ಎಂದರು. |
![]() | 500 ರು. ಗೆ ಗ್ಯಾಸ್ ಸಿಲಿಂಡರ್; ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ: ಆರು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಗೆಲವು ಸಾಧಿಸಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಖಭಂಗ ಮಾಡಿದ ಕಾಂಗ್ರೆಸ್ ಈಗ ಅದೇ ತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸುತ್ತಿದೆ. |
![]() | MSIL ಚಿಟ್ ಫಂಡ್ ನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರದ ಚಿಂತನೆಗ್ಯಾರಂಟಿ ಯೋಜನೆಗಳಡಿ ಮಹಿಳೆಯರು ಹಣಕಾಸಿನ ನೆರವು ಪಡೆಯುತ್ತಿರುವುದರಿಂದ, ರಾಜ್ಯ ಸರ್ಕಾರ MSIL ಚಿಟ್ ಫಂಡ್ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಚಿಂತನೆ ನಡೆಸಿದ್ದು, ಶೀಘ್ರದಲ್ಲಿ ಆ್ಯಪ್ ಬಿಡುಗಡೆಯಾಗಲಿದೆ. |
![]() | ಲೋಕಸಭೆ ಚುನಾವಣೆ: 'ಗ್ಯಾರಂಟಿ' ಅಸ್ತ್ರ ಬಳಸಿ 20 ಸ್ಥಾನ ಗೆಲ್ಲುವ ಭರವಸೆಯಲ್ಲಿ ರಾಜ್ಯ ಕಾಂಗ್ರೆಸ್!ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿಯಾಗಿ ಜಾರಿಗೆ ತಂದಿರುವ ರಾಜ್ಯ ಕಾಂಗ್ರೆಸ್, ಇದೀಗ ಕರ್ನಾಟಕದಲ್ಲಿ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. |
![]() | ಕರ್ನಾಟಕದ ಖಾತರಿಗಳಿಗಿಂತ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿರುವ ಆರು ಖಾತರಿಗಳು ಉತ್ತಮವಾಗಿವೆ: ಡಿಕೆ ಶಿವಕುಮಾರ್ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಅದರ ಚುನಾವಣಾ ಭರವಸೆಗಳನ್ನು ಜಾರಿಗೆ ತರಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ವರುಣಾದಲ್ಲಿ ಕುಕ್ಕರ್ ವಿತರಣೆ: ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸುವಂತೆ ಎಚ್ ಡಿಕೆ ಆಗ್ರಹಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ... |
![]() | ತೆಲಂಗಾಣ: ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿ ಘೋಷಿಸಿದ ಸೋನಿಯಾ ಗಾಂಧಿಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಬರಪೂರ ಯೋಜನೆಗಳನ್ನು ಘೋಷಿಸಿದೆ. ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಚುನಾವಣಾ ರ್ಯಾಲಿಯಲ್ಲಿ ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದರು. |
![]() | ಕರ್ನಾಟಕ ಆಯ್ತು, ಈಗ ತೆಲಂಗಾಣದಲ್ಲೂ 'ಐದು ಗ್ಯಾರಂಟಿ' ಘೋಷಣೆಗೆ ಕಾಂಗ್ರೆಸ್ ವೇದಿಕೆ ಸಜ್ಜು!ಕರ್ನಾಟಕ ಚುನಾವಣೆಯಲ್ಲಿ 'ಐದು ಗ್ಯಾರಂಟಿ' ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಮಾದರಿಯಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಘೋಷಣೆಗೆ ವೇದಿಕೆ ಸಜ್ಜಾಗಿದೆ. |
![]() | ಸಂಶೋಧನೆ ಇಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದೆ: ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿಪರಿಶೀಲನೆಗಳಿಲ್ಲದೆಯೇ ಸರ್ಕಾರ ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿದ್ದು, ಇದೀಗ ಆರ್ಥಿಕ ಕೊರತೆಯಿಂದ ಅವುಗಳ ಜಾರಿಗೆ ತರಲು ಹೆಣಗಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ ಶಾಜಿಯಾ ಇಲ್ಮಿ ಅವರು ಕಾಂಗ್ರೆಸ್ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದರು. |
![]() | ಈ ವರ್ಷ ಕ್ಷೇತ್ರಾಭಿವೃದ್ಧಿಗೆ ಹಣ ನೀಡಲು ಸಾಧ್ಯವಿಲ್ಲ: DCM ಡಿಕೆ ಶಿವಕುಮಾರ್!ಐದು ಚುನಾವಣಾ ಭರವಸೆಗಳ ಅನುಷ್ಠಾನದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಈ ವರ್ಷ ಕ್ಷೇತ್ರಾಭಿವೃದ್ಧಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. |