social_icon
  • Tag results for opposition leaders

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲೆಂದು ತನಿಖಾ ಸಮಿತಿ ರಚನೆ: ಭೈರತಿ ಬಸವರಾಜ್

ರಾಜ್ಯ ಕಾಂಗ್ರೆಸ್ ಸರ್ಕಾರವು 2019 ರಿಂದ 2022 ರವರೆಗಿನ ಕಾಮಗಾರಿಗಳು ಮತ್ತು ಬಿಲ್‌ಗಳ ತನಿಖೆಗಾಗಿ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.

published on : 9th August 2023

ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರ ವಿವಾದ ಕುರಿತು ಸರ್ಕಾರ ಕಟ್ಟಿ ಹಾಕಲು 'INDIA' ತಂತ್ರ: ಖರ್ಗೆ ನಿವಾಸದಲ್ಲಿ ಇಂದು ಚರ್ಚೆ

ಸಂಸತ್ತಿನ ಮುಂಗಾರು ಅಧಿವೇಶನ ಮುಂದುವರಿಯುತ್ತಿರುವುದರ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಣಿಪುರ ವಿವಾದ ಬಗ್ಗೆ ಹೇಳಿಕೆ ನೀಡಬೇಕೆಂದು ವಿಪಕ್ಷಗಳ ಒತ್ತಾಯ, ಪ್ರತಿಭಟನೆಗಳ ಮಧ್ಯೆ ಉಭಯ ಸದನಗಳಲ್ಲಿ ತೀವ್ರ ಗದ್ದಲ, ಕೋಲಾಹಲ ನಡೆಯುತ್ತಿದೆ.

published on : 3rd August 2023

ಮಣಿಪುರ ಸಮಸ್ಯೆ: ನಾಳೆ ವಿಪಕ್ಷ ನಾಯಕರಿಂದ ರಾಷ್ಟ್ರಪತಿ ಮುರ್ಮು ಭೇಟಿ

ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

published on : 1st August 2023

ಗಾಂಧಿಯವರನ್ನು ಕೊಂದ ಗೋಡ್ಸೆ ವಂಶದವರು ಇಂದು ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. 

published on : 21st July 2023

ತಮ್ಮ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ದೇಶದ ಹೆಸರನ್ನು ಬಳಸಿಕೊಳ್ಳುತ್ತಿವೆ: ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕ ದೂರು

ಭಾರತೀಯ ಜನತಾ ಪಕ್ಷದ ನಾಯಕ ಅಶುತೋಷ್ ದುಬೆ ಮಂಗಳವಾರ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ವಿರೋಧ ಪಕ್ಷಗಳ ಮೈತ್ರಿಗೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗ ಮೊರೆ ಹೋಗಿದ್ದಾರೆ.

published on : 19th July 2023

ಕನ್ನಡಿಗರ ಸ್ವಾಭಿಮಾನಕ್ಕೆ ಕಾಂಗ್ರೆಸ್ ಘಟಶ್ರಾದ್ಧ: ಐಎಎಸ್ ಜೀತ ಪದ್ಧತಿ; ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ!

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು.

published on : 18th July 2023

'ಸರ್ವಜನಾಂಗದ ಶಾಂತಿಯ ತೋಟದಲ್ಲಿ ಬಿತ್ತಿದ ಬೀಜ, ಬೆಳೆದು ಫಲ ನೀಡಲಿ': ವಿಪಕ್ಷಗಳ ಸಭೆಗೆ ಮುನ್ನ ಸಿಎಂ ಸಿದ್ದರಾಮಯ್ಯ ಟ್ವೀಟ್

ಇಂದಿನಿಂದ(ಜುಲೈ 17) ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಸಭೆಯ ಆತಿಥ್ಯವನ್ನು ಕರ್ನಾಟಕದ ಕಾಂಗ್ರೆಸ್ ನಾಯಕರು ವಹಿಸಿಕೊಂಡಿದ್ದಾರೆ. ಇಂದು ರಾತ್ರಿ 24 ವಿಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ.

published on : 17th July 2023

ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ, ಆ ಬಗ್ಗೆ ತಲೆ ಕೆಡಿಸಿಕೊಳ್ಳೋದು ಇಲ್ಲ, ನೋಡೋಣ ಮುಂದೇನಾಗುತ್ತದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ನಮಗೆ ಆಹ್ವಾನವನ್ನು ನೀಡಿಲ್ಲ, ನಾಳೆಯ ಎನ್ ಡಿಎ ಮೈತ್ರಿಕೂಟ ಸಭೆಗೂ ಆಹ್ವಾನವಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು, ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

published on : 17th July 2023

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ವಿಪಕ್ಷ ನಾಯಕರ ಸಭೆ: ಜುಲೈ 17ರಂದು ಸಿಎಂ ಔತಣಕೂಟ ಏರ್ಪಾಡು

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಭಾರೀ ಸ್ಪರ್ಧೆಯೊಡ್ಡಲು ಪರ್ಯಾಯ ಶಕ್ತಿ ರಚಿಸಲು ವಿಪಕ್ಷಗಳೆಲ್ಲಾ ಒಗ್ಗೂಡಲು ಮುಂದೆ ಬಂದಿದ್ದು ಎಲ್ಲಾ ಪ್ರತಿಪಕ್ಷ ನಾಯಕರುಗಳ ಎರಡನೇ ಸುತ್ತಿನ ಸಭೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೇಲ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

published on : 5th July 2023

ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಪರ್ಯಾಯ ಶಕ್ತಿ ರಚಿಸಲು ಎಲ್ಲಾ ವಿಪಕ್ಷಗಳ ತಂತ್ರ: ಜುಲೈ 17-18ರಂದು ಸಭೆ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್, ಸ್ಥಳೀಯ ಪಕ್ಷಗಳು ಸೇರಿದಂತೆ ವಿಪಕ್ಷಗಳು ಒಟ್ಟು ಸೇರಿ ತಂತ್ರ ಹೆಣೆಯಲು ಮುಂದಾಗಿದ್ದು ಅದರಂತೆ ಕಳೆದ ವಾರ ಬಿಹಾರದ ಪಾಟ್ನಾದಲ್ಲಿ ಸಭೆ ನಡೆಸಲಾಗಿತ್ತು. 

published on : 3rd July 2023

ಜುಲೈ 13-14ರಂದು ನಿಗದಿಯಾಗಿದ್ದ ವಿಪಕ್ಷಗಳ ಸಭೆ ಮುಂದೂಡಿಕೆ: ಸಂಸತ್ತು ಮುಂಗಾರು ಅಧಿವೇಶನ ನಂತರ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಜುಲೈ 13-14ರಂದು ನಿಗದಿಯಾಗಿದ್ದ ವಿಪಕ್ಷಗಳ ಸಭೆ ಮುಂದೂಡಲಾಗಿದೆ. ಸಂಸತ್ತು ಮುಂಗಾರು ಅಧಿವೇಶನ, ಬಿಹಾರ ರಾಜ್ಯದ ವಿಧಾನಸಭೆ ಅಧಿವೇಶನ, ಕರ್ನಾಟಕದಲ್ಲಿ ಇಂದಿನಿಂದ 10 ದಿನಗಳ ಕಾಲ ಅಧಿವೇಶನ ಇತ್ಯಾದಿ ಕಾರಣಗಳಿಂದ ವಿಪಕ್ಷಗಳ ಸಭೆ ಮುಂದೂಡಿಕೆಯಾಗಿದೆ ಎಂದು ಹೇಳಲಾಗುತ್ತಿದೆ.

published on : 3rd July 2023

2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ವಿಪಕ್ಷಗಳ ಕಾರ್ಯತಂತ್ರ: ಶಿಮ್ಲಾದಲ್ಲಿ ಮುಂದಿನ ಸಭೆ

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂಬ ಗುರಿ ಹೊಂದಿರುವ ವಿಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ಒಗ್ಗಟ್ಟಿನಿಂದ ಕೆಲಸ ಮಾಡಲು  ತೀರ್ಮಾನಿಸಿವೆ. ಮುಂದಿನ ಹೋರಾಟಕ್ಕೆ ಜಂಟಿ ಕಾರ್ಯತಂತ್ರ ರೂಪಿಸಲು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಮುಂದಿನ ತಿಂಗಳು ಸಭೆ ಸೇರಲು ತೀರ್ಮಾನಿಸಿವೆ.

published on : 24th June 2023

ಬಿಹಾರದ ಪಾಟ್ನಾದಲ್ಲಿ ಇಂದು ವಿರೋಧ ಪಕ್ಷಗಳ ಒಗ್ಗಟ್ಟು ಪ್ರದರ್ಶನ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣಿಸಲು ತಂತ್ರ

ಮುಂದಿನ ವರ್ಷ ಏಪ್ರಿಲ್ ಹೊತ್ತಿಗೆ ಲೋಕಸಭೆ ಚುನಾವಣೆ 2024 ನಡೆಯಲಿದೆ. ಭಾರತೀಯ ಜನತಾ ಪಾರ್ಟಿಯನ್ನು ಈ ಬಾರಿ ಸೋಲಿಸಲು ವಿರೋಧ ಪಕ್ಷಗಳು ತಮ್ಮದೇ ಆದ ತಂತ್ರ ಹೆಣೆಯಲು ಮುಂದಾಗಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸೇರಿದಂತೆ ಸ್ಥಳೀಯ ಪಕ್ಷಗಳು ಕಾರ್ಯಪ್ರವೃತ್ತವಾಗಿವೆ.

published on : 23rd June 2023

ಸಿದ್ದರಾಮಯ್ಯ ಸರ್ಕಾರಕ್ಕೆ 5 ಗ್ಯಾರಂಟಿ 'ಭಾಗ್ಯ'ಗಳದ್ದೇ ಚಿಂತೆ: ವಿರೋಧ ಪಕ್ಷಗಳಿಂದ, ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಟೀಕೆ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದು ಕಾಂಗ್ರೆಸ್ ನ ಗ್ಯಾರಂಟಿ ಭಾಗ್ಯಗಳು. ಬಿಜೆಪಿ ಚುನಾವಣೆಯಲ್ಲಿ ಸೋತು ಕಾಂಗ್ರೆಸ್ ಕೈಯನ್ನು ಜನರು ಈ ಬಾರಿ ಹಿಡಿಯಲು ನೆರವಾಗಿದ್ದೇ ಈ 5 ಗ್ಯಾರಂಟಿ ಭಾಗ್ಯಗಳು ಎಂದು ಹೇಳಲಾಗುತ್ತಿದೆ.

published on : 29th May 2023

ರಾಹುಲ್‌ ಗಾಂಧಿಗೆ ಜೈಲು ಶಿಕ್ಷೆ: ಪ್ರತಿಪಕ್ಷ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಭೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಪ್ರತಿಪಕ್ಷ ನಾಯಕರೊಂದಿಗೆ ಸಭೆ ನಡೆಸಿದರು ಮತ್ತು 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚಿಸಿದರು.

published on : 24th March 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9