social_icon
  • Tag results for protest

ಕೇಂದ್ರದ ವಿರುದ್ಧ ಪ್ರತಿಭಟನೆ: ವಿಶೇಷ ರೈಲು ನಿರಾಕರಿಸಿದ ನಂತರ, 39 ಬಸ್‌ಗಳಲ್ಲಿ ದೆಹಲಿಗೆ ಹೊರಟ ಟಿಎಂಸಿ ಬೆಂಬಲಿಗರು

ವಿಶೇಷ ರೈಲಿಗೆ ರೈಲ್ವೆ ಅಧಿಕಾರಿಗಳು ಅನುಮತಿ ನಿರಾಕರಿಸಿದ ನಂತರ, ಕೇಂದ್ರದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2,000 ಉದ್ಯೋಗ ಕಾರ್ಡ್ ಹೊಂದಿರುವವರನ್ನು ಹೊತ್ತ 39 ಬಸ್‌ಗಳು ಶನಿವಾರ ಕೋಲ್ಕತ್ತಾದಿಂದ 1,600...

published on : 30th September 2023

ಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು. 

published on : 29th September 2023

ಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್​ ಕುಮಾರ್​

ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.

published on : 29th September 2023

'ಕಾವೇರಿ'ದ ಹೋರಾಟ: ಒಗ್ಗಟ್ಟು ಪ್ರದರ್ಶಿಸಿದ ಚಂದನವನ, ಹೋರಾಟಕ್ಕೆ ಸ್ಯಾಂಡಲ್ ವುಡ್ ಕಲಾವಿದರ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ.  ಬಂದ್​ಗೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ಸೂಚಿಸಿದ್ದಾರೆ.

published on : 29th September 2023

'ಬುರ್ಖಾ ಧರಿಸಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ: ವಾಟಾಳ್ ನಾಗರಾಜ್ ಏನೆಂದರು?

ಮಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಇಂದು ಬುರ್ಖಾ ಧರಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿ ಜಲಕ್ಕಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಕನ್ನಡ ಒಕ್ಕೂಟ ನಾಯಕ ಮಾಜಿ ಶಾಸಕ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

published on : 29th September 2023

ಬೆಂಗಳೂರು ಬಂದ್‌ನಿಂದಾಗಿ ಅಂದಾಜು 1,500 ರಿಂದ 2,000 ಕೋಟಿ ರೂ. ನಷ್ಟ; ಕರ್ನಾಟಕ ಬಂದ್‌ಗೆ ಅನುಮತಿಯಿಲ್ಲ- ಪರಮೇಶ್ವರ

ಸೆಪ್ಟೆಂಬರ್ 29ರಂದು ಪ್ರತಿಭಟನೆಗೆ ಮಾತ್ರ ಅವಕಾಶವಿದೆ. ಯಾರಾದರೂ ಬಂದ್ ಆಚರಿಸುವಂತೆ ಬಲವಂತ ಮಾಡಿದರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಗುರುವಾರ ಹೇಳಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

published on : 28th September 2023

ಕಾವೇರಿ ನೀರಿಗಾಗಿ ಹೋರಾಟ ತೀವ್ರ: ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ರೈತರು, ಮಂಡ್ಯದಲ್ಲಿ ಪ್ರತಿಭಟನೆ

ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ರೈತರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದಿದ್ದು, ನೂರಾರು ರೈತರು ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

published on : 28th September 2023

ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಇಂಫಾಲದಲ್ಲಿ ಡಿಸಿ ಕಚೇರಿ ಧ್ವಂಸ, ಎರಡು ವಾಹನಗಳಿಗೆ ಬೆಂಕಿ

ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದು, ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಗುರುವಾರ ಮುಂಜಾನೆ ಇಂಫಾಲ್ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು, ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ

published on : 28th September 2023

ಕಾವೇರಿ ಹೋರಾಟ: ಸುತ್ತೂರು ಮಠದ ಶ್ರೀಗಳ ಬೆಂಬಲ

ಕಾವೇರಿ ನದಿ ನೀರು ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಬೆಂಬಲ ವ್ಯಕ್ತಪಡಿಸಿದ್ದು, ನೆರೆ ರಾಜ್ಯ  ತಮಿಳುನಾಡಿಗೆ ನೀರು ಬಿಡುವ ಮೊದಲು ರಾಜ್ಯದ ನೀರಿನ ಅವಶ್ಯಕತೆಗಳನ್ನು ಪೂರೈಸಬೇಕು ಎಂದು ಹೇಳಿದ್ದಾರೆ.

published on : 28th September 2023

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್‌ ಯಡಿಯೂರಪ್ಪ

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.

published on : 27th September 2023

ಕರ್ನಾಟಕ ಬಂದ್ ಹಿಂಪಡೆಯುವುದಿಲ್ಲ- ಕನ್ನಡಪರ ಹೋರಾಟಗಾರರು; ಇಂದು ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

published on : 27th September 2023

ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!

ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. 

published on : 27th September 2023

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

published on : 26th September 2023

ಕಾವೇರಿ ವಿವಾದ: ಬಾಯಿಯಲ್ಲಿ ಇಲಿ ಹಿಡಿದುಕೊಂಡು ತಮಿಳುನಾಡು ರೈತರ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆಗ್ರಹಿಸಿ ಕರ್ನಾಟಕ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರೈತರು ಮಂಗಳವಾರ ತಿರುಚ್ಚಿಯಲ್ಲಿ ಬಾಯಿಯಲ್ಲಿ ಇಲಿಗಳನ್ನು ಹಿಡಿದು ಅನಿರೀಕ್ಷಿತ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

published on : 26th September 2023

'ನಮ್ಮ ಜಲ, ನಮ್ಮ ಹಕ್ಕು' ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದರ ವಿರುದ್ದ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದಿದ್ದಾರೆ.

published on : 26th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9