ಮೇ 7 ರಂದು ದೇಶದಲ್ಲಿ 3ನೇ ಹಂತದ ಮತ್ತು ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಉಳಿದ 14 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.