ಶನಿದೇವರೇ ನೆಲೆ ನಿಂತಿರುವ ಈ ಗ್ರಾಮ ದೇಶದಲ್ಲಿ ಪ್ರಖ್ಯಾತವಾಗಿದ್ದು ಸಹಸ್ರಾರು ಜನ ನಿತ್ಯವೂ ದೇಶದಲ್ಲಿ ಪ್ರಖ್ಯಾತವಾಗಿದ್ದು ಸಹಸ್ರಾರು ಜನ ನಿತ್ಯವೂ ಇಲ್ಲಿಗೆ ಆಗಮಿಸುವರು. ವಿಶೇಷವೆಂದರೆ ಈ ಶನಿದೇವರ ಮಂದಿರಕ್ಕೆ ಯಾವ ಬಾಗಿಲು, ಕಿಟಕಿ, ಗೋಪುರಗಳಲ್ಲ. ಬಯಲಿನ ನಡುವೆಯೇ ನಿಂತಿರುವ ಶನಿದೇವರ ನೆಲೆಯಾದ ಈ ಊರಿನಲ್ಲಿರುವ ಮನೆ, ಅಂಗಡಿ, ಬ್ಯಾಂಕ್, ಶಾಲೆಯಂತಹಾ ಕಛೇರಿಗಳಿಗೆ ಸಹ ಬಾಗಿಲು, ಬೀಗಗಳಿಲ್ಲ! ಇಲ್ಲಿ ಕಳ್ಳತನ ಮಾಡಿದ್ದರೆ ಶನಿದೇವರ ಪ್ರಕೋಪಕ್ಕೆ ಈಡಾಗಬೇಕಾಗುವುದು ಎನ್ನುವ ನಂಬಿಕೆ ಇದ್ದು ಶನಿದೇವರ ಅಣತಿಯಂತೆಯೇ ಇಲ್ಲಿ ಯಾರ ಮನೆ, ಕಛೇರಿಗಳಿಗೆ ಬಾಗಿಲು ಇರುವುದಿಲ್ಲವಂತೆ.