ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ: ವೈಮಾನಿಕ ಸಮೀಕ್ಷೆ; ಪರಿಶೀಲನೆ

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಪ್ರಧಾನಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಹಾನಿಗೊಂಡ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳನ್ನು ವೀಕ್ಷಿಸಿದರು.

ಪ್ರಧಾನಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಇದ್ದರು. ವೈಮಾನಿಕ ಸಮೀಕ್ಷೆಯ ನಂತರ ಅವರು ಇಲ್ಲಿನ ಕಲ್ಪೆಟ್ಟಾದಲ್ಲಿರುವ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆಗೆ ಬಂದಿಳಿದ ಪ್ರಧಾನಿ ಅಲ್ಲಿಂದ ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪ್ರದೇಶಗಳಿಗೆ ತೆರಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com