Watch | ಹುಚ್ಚರ ಸಂತೆ ಇದು, ನಾಲಾಯಕ್ ಸರ್ಕಾರ: ಬಿಜೆಪಿ ಸಭಾತ್ಯಾಗ!

ಕಾಂಗ್ರೆಸ್ ಶಾಸಕರಿಂದ ಕಲಾಪಕ್ಕೆ ಅಡ್ಡಿ ಉಂಟಾದುದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಶಾಸಕರು ವಿಧಾನಸಭೆಯಿಂದ ಹೊರನಡೆದರು.

ವಕ್ಫ್ ವಿವಾದ, ಬಳ್ಳಾರಿಯಲ್ಲಿ ಬಾಣಂತಿಯರ ಮರಣ, ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳಂತಹ ಮಹತ್ವದ ವಿಷಯಗಳ ಚರ್ಚೆಗೆ ನಿರಾಕರಿಸಿದ್ದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅತೃಪ್ತಿ ವ್ಯಕ್ತಪಡಿಸಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ಈ ವಿಷಯಗಳ ಕುರಿತು ಮುಂದೂಡಿಕೆ ನಿರ್ಣಯವನ್ನು ಸಲ್ಲಿಸಿದ್ದರೂ, ಅವುಗಳನ್ನು ಚರ್ಚಿಸಲು ಅವಕಾಶ ನೀಡಲಿಲ್ಲ ಎಂದು ಅವರು ಪ್ರಶ್ನಿಸಿದರು.

ಆಡಳಿತ ಪಕ್ಷದ ಶಾಸಕರು ಆಗಾಗ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಉದ್ದೇಶಪೂರ್ವಕವಾಗಿ ವಿಧಾನಸಭೆಯ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷವು ಆರೋಪಿಸಿದೆ.

ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com