ಮಳೆ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಕುಟುಂಬದ ನಾಲ್ವರ ದುರ್ಮರಣ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.

ಸ್ಥಳೀಯರ ಪ್ರಕಾರ, ಪಕ್ಕದ ಮನೆಯವರ ಗೋಡೆಯು ಸಂತ್ರಸ್ತ ಯಾಸಿರ್ ಅವರ ಮನೆಗೆ ಬಹಳ ಹತ್ತಿರದಲ್ಲಿತ್ತು ಮತ್ತು ಅದೇ ವಿಷಯವಾಗಿ ಅವರ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು.

ಘಟನೆಯ ನಂತರ ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com