ಬಯಲುಸೀಮೆಗೆ ಕುಡಿಯುವ ನೀರು: ಎತ್ತಿನಹೊಳೆ ಯೋಜನೆಗೆ ಚಾಲನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 23,251.66 ಕೋಟಿ ರೂ.ಗಳ ಮಹತ್ವಾಕಾಂಕ್ಷೆಯ ಮೊದಲ ಹಂತದ ಕುಡಿಯುವ ನೀರಿನ ಎತ್ತಿನಹೊಳೆ ಯೋಜನೆಗೆ ಶುಕ್ರವಾರ ಚಾಲನೆ ನೀಡಿದರು. ಯೋಜನೆಯನ್ನು ಮಾರ್ಚ್ 31, 2027 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ.

ಆಲಮಟ್ಟಿ (ಅಣೆಕಟ್ಟು) ನಂತರ ಕರ್ನಾಟಕದ ಇತಿಹಾಸದಲ್ಲಿ ಇದು ಅತ್ಯಂತ ಮಹತ್ವದ ಯೋಜನೆಯಾಗಿದೆ. 6,657 ಗ್ರಾಮಗಳು, 27 ತಾಲ್ಲೂಕುಗಳು ಮತ್ತು 56 ವಿಧಾನಸಭಾ ಕ್ಷೇತ್ರಗಳು ಕುಡಿಯುವ ನೀರಿನಿಂದ ಪ್ರಯೋಜನ ಪಡೆಯಲಿವೆ.

ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಎತ್ತಿನಹೊಳೆ, ಕಾಡುಮನೆ ಹೊಳೆ, ಕೇರಿ ಹೊಳೆ ಮತ್ತು ಹೊಂಗಡ ಹಳ್ಳದಿಂದ ಮಳೆಗಾಲದಲ್ಲಿ ಲಭ್ಯವಿರುವ 24.01 ಟಿಎಂಸಿ ನೀರನ್ನು ಈ ಯೋಜನೆ ಬಳಸಿಕೊಳ್ಳಲಿದೆ.

ಬರಪೀಡಿತ ಪ್ರದೇಶಗಳಲ್ಲಿ ವಿಶೇಷವಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಾಗು ಹಾಸನ, ಚಿಕ್ಕಮಗಳೂರು, ತುಮಕೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಇತರ ಅಗತ್ಯವಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಗ್ಗಿಸುವುದು ಯೋಜನೆಯ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com