Watch | ಅಟ್ಟಾರಿ ಗಡಿ ಬಂದ್: ಭಾರತ ತೊರೆಯಲು ಪಾಕಿಸ್ತಾನಿಗಳು ದೌಡು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಅಟ್ಟಾರಿಯಲ್ಲಿರುವ ಸಮಗ್ರ ಚೆಕ್‌ಪೋಸ್ಟ್ ಅನ್ನು ಮುಚ್ಚಿದೆ.

ಭಾರತವು ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು (SVES) ಸ್ಥಗಿತಗೊಳಿಸಿದೆ, ಅದರ ಪ್ರಕಾರ ಭಾರತದಲ್ಲಿರುವ SVES ವೀಸಾ ಹೊಂದಿರುವ ಪಾಕಿಸ್ತಾನಿ ನಾಗರಿಕರು 48 ಗಂಟೆಗಳ ಒಳಗೆ ದೇಶವನ್ನು ತೊರೆಯಬೇಕು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಚಿವ ಸಂಪುಟ ಸಮಿತಿ (CCS) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಾಕಿಸ್ತಾನಿ ಪ್ರಜೆಗಳು ತಮ್ಮ ದೇಶಕ್ಕೆ ಮರಳಲು ಅಟ್ಟಾರಿ-ವಾಘಾ ಗಡಿಯನ್ನು ತಲುಪುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com