ವಿಡಿಯೋ
Watch | ಕಿರಣ್ ರಿಜಿಜು ನನ್ನನ್ನು ತಳ್ಳಿ, ಹಲ್ಲೆ ಮಾಡಿದ್ದಾರೆ: ಟಿಎಂಸಿ ಸಂಸದೆ ಆರೋಪ
ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ PM, CM, ಕೇಂದ್ರ ಸಚಿವರು, ರಾಜ್ಯ ಸಚಿವರು 30 ದಿನಗಳ ಕಾಲ ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು.
ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮೂರು ಮಸೂದೆಗಳನ್ನು ಮಂಡಿಸಿದರು. ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧಕ್ಕೆ ಕಾರಣವಾಯಿತು.
ಮಸೂದೆಯನ್ನು ಮಂಡಿಸಿದ ತಕ್ಷಣ, ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ಪ್ರಾರಂಭಿಸಿದರು. ಸದನದ ಬಾವಿಗೆ ದೌಡಾಯಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಕಿರಣ್ ರಿಜಿಜು, ರವನೀತ್ ಸಿಂಗ್ ಬಿಟ್ಟು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಸಂಸದೆ ಮಿತಾಲಿ ಬಾಗ್ ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ