Watch | ಕಾಲೇಜು ವಿದ್ಯಾರ್ಥಿನಿ ಸಾವು: ಒಡಿಶಾ ಸಚಿವಾಲಯ ಹೊರಗೆ ಬೃಹತ್ ಪ್ರತಿಭಟನೆ

ಭುವನೇಶ್ವರದಲ್ಲಿ ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಖಂಡಿಸಿ ಒಡಿಶಾ ಸೆಕ್ರೆಟರಿಯೇಟ್ ಹೊರಗೆ ಬುಧವಾರ ವಿರೋಧ ಪಕ್ಷ ಬಿಜು ಜನತಾ ದಳ ಬೃಹತ್ ಪ್ರತಿಭಟನೆ ನಡೆಸಿತು.

ಒರಿಸ್ಸಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿರುವ ಬಿಜೆಡಿ, ಬಾಲಸೋರ್ ಪಟ್ಟಣದಲ್ಲಿ ಬಂದ್ ಗೆ ಕರೆ ನೀಡಿದೆ.

ಭುವನೇಶ್ವರದಲ್ಲಿ, ನೂರಾರು ಬಿಜೆಡಿ ಕಾರ್ಯಕರ್ತರು ಮಾಸ್ಟರ್ ಕ್ಯಾಂಟೀನ್ ಚೌಕದಿಂದ ರಾಜ್ಯ ಸೆಕ್ರೆಟರಿಯೇಟ್ ಕಡೆಗೆ ಮೆರವಣಿಗೆ ನಡೆಸಿದರು.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳು ಮತ್ತು ಜಲ ಫಿರಂಗಿಗಳನ್ನು ಬಳಸಬೇಕಾಯಿತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com