Watch | ನಮ್ಮ ತಲೆಗೆ ಬಂದೂಕು ಹಿಡಿಯುವ ಜನರೊಂದಿಗೆ ಯಾವುದೇ ಮಾತುಕತೆ ಇಲ್ಲ!

ಯುನೈಟೆಡ್ ಸ್ಟೇಟ್ಸ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಮಾಧ್ಯಮ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಾಕಿಸ್ತಾನವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ಅವರು ನಮಗೆ ಹೊಡೆದರೆ ಭಾರತ ಅವರಿಗೆ ಪ್ರತಿಯಾಗಿ ಹೊಡೆಯುತ್ತದೆ ಎಂದು ಬಲವಾದ ಸಂದೇಶವನ್ನು ಶತ್ರುರಾಷ್ಟ್ರಕ್ಕೆ ಕಳುಹಿಸಿದ್ದಾರೆ.

ನಮ್ಮ ತಲೆಗೆ ಬಂದೂಕು ಹಿಡಿಯುವ ಜನರೊಂದಿಗೆ ಭಾರತ ಮಾತುಕತೆ ನಡೆಸುವುದಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಆಪರೇಷನ್ ಸಿಂಧೂರ್ ನಂತರ ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಅಮೆರಿಕಕ್ಕೆ ತೆರಳಿರುವ ಸರ್ವ ಪಕ್ಷ ನಿಯೋಗಕ್ಕೆ ಶಶಿ ತರೂರ್ ನಾಯಕರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com