ವಿಡಿಯೋ
Watch | ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ವಶಕ್ಕೆ; ಫ್ರೀಡಂ ಪಾರ್ಕ್ ನಲ್ಲಿ ಹೈಡ್ರಾಮ
ಕೆಎಸ್ ಆರ್ ಟಿಸಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.
ವಿಡಿಯೋ ಇಲ್ಲಿದೆ ನೋಡಿ.
