Watch | ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ

ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುತ್ತಿರುವ ಧರ್ಮಸ್ಥಳ ಪ್ರಕರಣದಲ್ಲಿ ನೈರ್ಮಲ್ಯ ಕಾರ್ಮಿಕ ಸಿ ಎನ್ ಚಿನ್ನಯ್ಯ ಕುಟುಂಬಕ್ಕೆ ಅಧಿಕಾರಿಗಳು ರಕ್ಷಣೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದ್ದಾರೆ.

ಚಿನ್ನಯ್ಯ ಅವರ ಪತ್ನಿ ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಅವರಿಗೆ ರಕ್ಷಣೆ ಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಸಂಬಂಧ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, "ಅಂತಹದ್ದೇನಾದರೂ ಕಂಡುಬಂದರೆ, ಧರ್ಮಸ್ಥಳದಲ್ಲಿ ದೊಡ್ಡ ತನಿಖೆ ನಡೆಯುತ್ತಿರುವುದರಿಂದ ನಾವು ಅವರಿಗೆ ರಕ್ಷಣೆ ನೀಡುತ್ತೇವೆ.

ಸತ್ಯವನ್ನು ಹೊರತರುವಲ್ಲಿ ಯಾರಾದರೂ ಸಮಸ್ಯೆ ಎದುರಿಸಿದರೆ, ನಾವು ಅವರನ್ನು ಖಂಡಿತವಾಗಿಯೂ ರಕ್ಷಿಸುತ್ತೇವೆ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com