Watch | ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದ್ದಾರೆ.

ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವದಂತಿಗೆ ಹೈಕಮಾಂಡ್ ತೆರೆ ಎಳೆದಂತಾಗಿದೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳಿರುವುದು ನಿಜ, ಅದು ಶೀಘ್ರವೇ ಬಗೆಹರಿಯಲಿದೆ.

ನಾನು ಸಿಎಂ ಆಗಬೇಕೆಂದು ಕೆಲವರು ಹೇಳುತ್ತಾರೆ, ನೀವು ಮಾಧ್ಯಮದವರು ಕೂಡ ಆಗಾಗ ಆ ವಿಷಯ ಬಗ್ಗೆ ಮಾತನಾಡುತ್ತಿರುತ್ತೀರಿ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ದುಡಿಮೆ ಮುಖ್ಯ ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com