Watch | ಬೌರಿಂಗ್ ಆಸ್ಪತ್ರೆ ದುರಂತ: ಸ್ಥಳೀಯ ಮುಖಂಡರು, ಡಿಸಿಎಂ ವಿರುದ್ಧ ನೊಂದವರ ಆಕ್ರೋಶ

ಬೆಂಗಳೂರಿಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದುಬಿದ್ದು ದುರಂತ ಸಂಭವಿಸಿದೆ.

ಈ ಘಟನೆಯಲ್ಲಿ 6 ವರ್ಷದ ಮಗು ಸೇರಿ ಒಟ್ಟು 7 ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ದುರ್ಘಟನೆಯಲ್ಲಿ ಬೆಂಗಳೂರು ಮೂಲದವರು ಮಾತ್ರವಲ್ಲದೆ, ಕೇರಳದ ಪ್ರವಾಸಿಗರು ಹಾಗೂ ಅಂತರರಾಜ್ಯ ಕಾರ್ಮಿಕರು ದಾರುಣ ಸಾವನ್ನಪ್ಪಿದ್ದಾರೆ.

ಘಟನೆ ಕುರಿತು ಆ ಪ್ರದೇಶದ ಸ್ಥಳೀಯ ಮುಖಂಡರು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರಿಸುವಂತೆ ನೊಂದ ವ್ಯಕ್ತಿಗಳು ಆಗ್ರಹಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರ ಸಂಬಂಧಿಯೊಬ್ಬರು ಮಾತನಾಡಿ, "...ಮಳೆಯಿಂದಾಗಿ ಗೋಡೆ ಕುಸಿದಿದೆ... ನನ್ನ ಸಹೋದರನ ಸ್ಥಿತಿ ತುಂಬಾ ಗಂಭೀರವಾಗಿದೆ..." ಎಂದು ನೋವು ತೋಡಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

X

Advertisement

X
Kannada Prabha
www.kannadaprabha.com