ವಿಡಿಯೋ
ಇತ್ತೀಚೆಗೆ ನಡೆದ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದ ಪ್ರತಿಭಟನೆಗಳ ಸಂದರ್ಭದಲ್ಲಿ ಕಂಡುಬಂದಂತಹ ಪ್ರತಿಕ್ರಿಯೆ ರಾಹುಲ್ ಗಾಂಧಿಯವರ ಛಾತ್ರೋನ್ ಕಿ ಗೂಂಜ್ ಅಭಿಯಾನದಲ್ಲಿ ಬರಲಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಹೇಳಿದ್ದಾರೆ.
ಭಾರತದ ಅಂತರರಾಷ್ಟ್ರೀಯ ಏಕೀಕರಣ ಚಳವಳಿಯ (IIMUN) 15 ನೇ ವಾರ್ಷಿಕೋತ್ಸವದಲ್ಲಿ ಶುಕ್ರವಾರ ತರೂರ್ ಪಾಲ್ಗೊಂಡಿದ್ದ ವೇಳೆ ಈ ಹೇಳಿಕೆ ನೀಡಿದ್ದಾರೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಮ್ಮತಿಸಿದ ಕಾಂಗ್ರೆಸ್ ಸಂಸದ ಶಶಿ ತರೂರ್, "ನೀವು ಹೇಳಿದ್ದು ಸರಿ. ಅದಕ್ಕಾಗಿಯೇ ನಾವು ನಮ್ಮನ್ನು ಕೇಳಿಕೊಳ್ಳಬೇಕು, ನಾವು ಏನು ಮಾಡಲು ವಿಫಲರಾಗಿದ್ದೇವೆ?" ಎಂದು ಹೇಳಿದರು.
ಇದು ಪಕ್ಷದೊಳಗೆ, Gen-Z ಅವರ ಮಾತನ್ನು ಕೇಳಲು ಕಾಂಗ್ರೆಸ್ ವಿಫಲವಾಗಿದೆಯೇ? ಎಂಬ ತೀಕ್ಷ್ಣವಾದ ಪ್ರಶ್ನೆಯನ್ನು ಹುಟ್ಟುಹಾಕಿದೆ. ವಿಡಿಯೋ ಇಲ್ಲಿದೆ ನೋಡಿ.