ವಿಡಿಯೋ
ಚೆನ್ನೈನ ಮಹಾಬಲಿಪುರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ದಕ್ಷಿಣ ರಾಜ್ಯಗಳ 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆಯಿತು.
ಕರ್ನಾಟಕದ ಪರವಾಗಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಭೆಯ ನಂತರ ಚೆನ್ನೈನಲ್ಲಿ ಮಾತನಾಡಿ, ಸಭೆ ಚೆನ್ನಾಗಿ ನಡೆಯಿತು, ದಕ್ಷಿಣ ರಾಜ್ಯದ ಹಿತದೃಷ್ಟಿಯಿಂದ ನಾವು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದೆವು.
1971 ರ ಜನಗಣತಿಯನ್ನು ಗೌರವಿಸಲು ಮತ್ತು ಸಂಸತ್ತಿನಲ್ಲಿ ಸ್ಥಾನಗಳ ಸಂಖ್ಯೆಯನ್ನು ಉಳಿಸಿಕೊಳ್ಳಲು ನಾವು ಗೃಹ ಸಚಿವರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಉದ್ದೇಶಿತ ಮೇಕೆದಾಟು ಅಣೆಕಟ್ಟು ವಿಷಯದಲ್ಲಿ ತಮಿಳುನಾಡು ಮತ್ತು ಪುದುಚೇರಿಯ ಹಿತಾಸಕ್ತಿಗಳನ್ನು ರಕ್ಷಿಸಲು ಅಮಿತ್ ಶಾ ಸಮ್ಮುಖದಲ್ಲಿ ಬದ್ಧತೆಯನ್ನು ಮಾಡಿದ್ದೇವೆ.
ಅಣೆಕಟ್ಟು ನಮಗಾಗಿ ಅಲ್ಲ, ನಿಮಗಾಗಿ ಮಾತ್ರ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾಗಿ ಶಿವಕುಮಾರ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.