ವಿಡಿಯೋ
ಕರ್ನಾಟಕ ಸರ್ಕಾರವು ಸಂರಕ್ಷಿತ ಉದ್ಯಾನವನಗಳ ಸ್ಥಳಾಂತರವನ್ನು ನಿಲ್ಲಿಸಬೇಕೆಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬುಧವಾರ ಒತ್ತಾಯಿಸಿದರು.
ಈ ಕುರಿತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು, ನಾಗರಿಕರ ವೇದಿಕೆಯೊಂದಿಗೆ ಆಗಸ್ಟ್ 30 ರ ಭಾನುವಾರ ಲಾಲ್ಬಾಗ್ ಬೊಟಾನಿಕಲ್ ಗಾರ್ಡನ್ನಲ್ಲಿ ಪ್ರತಿಭಟನಾ ಪಾದಯಾತ್ರೆ ನಡೆಸುವುದಾಗಿ ಸೂರ್ಯ ಘೋಷಿಸಿದ್ದಾರೆ.
ಬೆಳಿಗ್ಗೆ 7:30 ಕ್ಕೆ ಪ್ರಾರಂಭವಾಗಲಿರುವ ಈ ಪ್ರತಿಭಟನೆಗೆ ಹಿರಿಯ ಪರಿಸರವಾದಿ ಮತ್ತು ಮಾಜಿ ಪರಿಸರ ಕಾರ್ಯದರ್ಶಿ ಎ.ಎನ್. ಯಲ್ಲಪ್ಪ ರೆಡ್ಡಿ ನೇತೃತ್ವ ವಹಿಸಲಿದ್ದಾರೆ.
ಉನ್ನತ ಮಟ್ಟದ ನಿಯೋಗದೊಂದಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡಿದ ನಂತರ ತೇಜಸ್ವಿ ಸೂರ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂರಕ್ಷಿತ ಉದ್ಯಾನವನಗಳ ಸ್ಥಳಾಂತರ ಕುರಿತು ಮಧ್ಯಪ್ರವೇಶಿಸುವಂತೆ ಕೋರಿ ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.