ವಿಡಿಯೋ
ಕರ್ನಾಟಕ ಸರ್ಕಾರ ಜನವರಿ 22 ರಿಂದ 31ರವರೆಗೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿತ್ತು.
ಅದರ ಪ್ರಕಾರ ಗುರುವಾರ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ವಿಧಾನಸೌಧದಲ್ಲಿ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿ ಕಲಾಪ ಆರಂಭವಾಗಬೇಕಿತ್ತು.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ, ಸ್ಪೀಕರ್ ಮತ್ತು ಇತರರಿಗೆ ಶುಭಾಶಯ ಸೇರಿದಂತೆ ಕೇವಲ 2 ಸಾಲುಗಳನ್ನು ಮಾತನಾಡಿದರು, ನಂತರ ಇಡೀ ಭಾಷಣವನ್ನು ಓದದೆ ಹೊರನಡೆದರು.
ಈ ಕುರಿತು ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕು. ರಾಜ್ಯಪಾಲರು ಸರ್ಕಾರದ ಭಾಷಣವನ್ನಲ್ಲ, ತಮ್ಮದೇ ಭಾಷಣದ ಒಂದು ವಾಕ್ಯವನ್ನು ಓದಿದರು.
ಇದು ಪ್ರತಿನಿಧಿ ಸಭೆಗೆ ಮಾಡಿದ ಅವಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement