Watch | 'ಸುರಂಗ ರಸ್ತೆ'ಗಾಗಿ ಮರಗಳ ಕಟ್; ಹೈಕೋರ್ಟ್ ಆದೇಶಕ್ಕೆ ತೇಜಸ್ವಿ ಸೂರ್ಯ ಧನ್ಯವಾದ

ಬೆಂಗಳೂರು ಸುರಂಗ ಯೋಜನೆಯನ್ನು ಪ್ರಶ್ನಿಸಿ ಮತ್ತು BMLTA ನಿಯಮಗಳ ನಿಯಮ 24 ರ ಸವಾಲನ್ನು ಪ್ರಶ್ನಿಸಿ ಸಲ್ಲಿಸಲಾದ PIL ಗಳಿಗೆ ಸಂಬಂಧಿಸಿದ ವಿಚಾರಣೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕರ್ನಾಟಕ ಹೈಕೋರ್ಟ್ ಮುಂದೆ ಗುರುವಾರ ಹಾಜರಾದರು.

ಅರ್ಜಿಯ ವಿಚಾರಣೆ ಬಾಕಿ ಇರುವ ಬಗ್ಗೆ ಸಂಭಾವ್ಯ/ಸಂಭವನೀಯ ಗುತ್ತಿಗೆದಾರರಿಗೆ ತಿಳಿಸುವಂತೆ ಮುಖ್ಯ ನ್ಯಾಯಮೂರ್ತಿಗಳು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದರು.

ಯಾವುದೇ ಒಪ್ಪಂದದ ನೀಡುವಿಕೆಯು PIL ಗಳ ಕುರಿತ ತೀರ್ಪಿಗೆ ಒಳಪಟ್ಟಿರುತ್ತದೆ.

ಅಲ್ಲದೆ, ಲಾಲ್‌ಬಾಗ್‌ನಲ್ಲಿ ಮರಗಳನ್ನು ಕಡಿಯುವುದರ ವಿರುದ್ಧದ ಹಿಂದಿನ ಆದೇಶವನ್ನು ನ್ಯಾಯಾಲಯ ಪುನರುಚ್ಚರಿಸಿದೆ.

ಆಗಸ್ಟ್ 20 ರಂದು ಹೈಕೋರ್ಟ್ ಅಂತಿಮವಾಗಿ ಈ ವಿಷಯವನ್ನು ವಿಚಾರಣೆ ನಡೆಸಲಿದೆ.

ಈ ವಿಷಯದ ಅಂತಿಮ ವಿಚಾರಣೆ ಬಾಕಿ ಇರುವ ನಡುವೆಯೂ ಹೈಕೋರ್ಟ್ ನೀಡಿರುವ ಮಧ್ಯಂತರ ರಕ್ಷಣೆಗಾಗಿ ನಾನು ಆಭಾರಿಯಾಗಿದ್ದೇನೆ.

ಸುರಂಗ ರಸ್ತೆ ಯೋಜನೆಯು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಮತ್ತು ಯೋಜನೆ ಕುರಿತು ಯಾವುದೇ ಪರಿಸರ ಪರಿಣಾಮದ ಮೌಲ್ಯಮಾಪನವನ್ನು ನಡೆಸಲಾಗಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com