ವಿಡಿಯೋ
ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಶನಿವಾರ ಚಿತ್ರದುರ್ಗದಲ್ಲಿ ನಡೆದ 'ಯಡಿಯೂರಪ್ಪ ಅಭಿಮಾನೋತ್ಸವ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಿಜೆಪಿಯ ರಾಜಕೀಯದಲ್ಲಿ 50 ವರ್ಷಗಳನ್ನು ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಅಮಿತ್ ಶಾ, "ಶ್ರೀ ಅರಬಿಂದೋ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿ ಅವರು ಜನಿಸಿದ ಪಶ್ಚಿಮ ಬಂಗಾಳದಲ್ಲಿ ಇಂದು ಕೇಸರಿ ಧ್ವಜ ಏರಿದ ಅದ್ಭುತ ದಿನ" ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ವಿವಿಧ ಪಂಗಡಗಳ ಮಠಾಧೀಶರನ್ನು ಒಟ್ಟುಗೂಡಿಸುವಲ್ಲಿ ಯಡಿಯೂರಪ್ಪ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶಾ ಹೇಳಿದರು.
ದಕ್ಷಿಣ ಭಾರತದಲ್ಲಿ ಬಿಜೆಪಿ ಎಂದಿಗೂ ಸರ್ಕಾರ ರಚಿಸುವುದಿಲ್ಲ ಎಂದು ಘೋಷಿಸಿದವರು ಹೇಳಿದ್ದು ತಪ್ಪು ಎಂದು ಯಡಿಯೂರಪ್ಪ ಸಾಬೀತುಪಡಿಸಿದರು ಎಂದು ಅಮಿತ್ ಶಾ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement