ಭಾರತದಲ್ಲಿ ಕ್ರಿಕೆಟ್ ಆಡುವ ಪ್ರಶ್ನೆಯೇ ಇಲ್ಲ: ಪಿಸಿಬಿ ಮುಖ್ಯಸ್ಥ ಶರ್ಯಾರ್ ಖಾನ್

ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ. ...
ಶರ್ಯಾರ್ ಖಾನ್
ಶರ್ಯಾರ್ ಖಾನ್

ಲಾಹೋರ್ : ಭಾರತ-ಪಾಕ್ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡುವ ಪ್ರಶ್ನೆಯೇ ಇಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶರ್ಯಾರ್ ಖಾನ್ ಸ್ಪಷ್ಟ ಪಡಿಸಿದ್ದಾರೆ.

ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಭಾರತ-ಪಾಕ್ ಕ್ರಿಕೆಟ್ ಸರಣಿಯನ್ನು ಡಿಸೆಂಬರ್ ನಲ್ಲಿ ಆಯೋಜಿಸಲು ಪಾಕಿಸ್ತಾನಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಶರ್ಯಾರ್ ಖಾನ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ- ಪಾಕ್ ಸರಣಿಯನ್ನು ಯುಎಇಯಲ್ಲಿ ಆಡುವುದಾದರೇ ಮಾತ್ರ ತಾನು ಭಾಗವಹಿಸುವುದಾಗಿ ಪಿಸಿಬಿ ತಿಳಿಸಿದೆ. ಪಾಕಿಸ್ತಾನದ ಜೊತೆಗೆ ಯುಎಇಯಲ್ಲಿ ಕ್ರಿಕೆಟ್ ಆಡಲು ಭಾರತ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಈ ಹಿಂದೆ ಹೇಳಿದ್ದರು.

ಆದರೆ, ಯಾವುದೇ ಕಾರಣಕ್ಕೂ ಭಾರತದಲ್ಲಿ ಪಾಕಿಸ್ತಾನ ಕ್ರಿಕೆಟ್ ಆಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡು ಮಾಡುವಂತೆ ಹೇಳಿರುವ ಪಿಸಿಬಿ, ಯುಎಇಯಲ್ಲಿ ಭಾರತ ಆಡದಿರಲು ಏನು ಕಾರಣ ಎಂಬುದನ್ನು ಸ್ಪಷ್ಟಪಡಿಸುವಂತೆ ಪಿಸಿಬಿ ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com