ಕಾಶ್ಮೀರ ವಿವಾದ ವಿಭಜನೆ ಸಂದರ್ಭದಲ್ಲಿ ಇತ್ಯರ್ಥವಾಗದೆ ಉಳಿದಿರುವ ವಿಷಯ: ಪಾಕ್ ಸೇನಾ ಮುಖ್ಯಸ್ಥ

ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಕಾಶ್ಮೀರ ವಿವಾದವನ್ನು ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದ ಇತ್ಯರ್ಥವಾಗದೆ ಉಳಿದಿರುವ ವಿಷಯ ಎಂದು ಹೇಳಿದ್ದಾರೆ.
ಕಾಶ್ಮೀರ ವಿವಾದ ವಿಭಜನೆ ಸಂದರ್ಭದಲ್ಲಿ ಇತ್ಯರ್ಥವಾಗದೆ ಉಳಿದಿರುವ ವಿಷಯ: ಪಾಕ್ ಸೇನಾ ಮುಖ್ಯಸ್ಥ
Updated on

ಇಸ್ಲಾಮಾಬಾದ್: ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಕಾಶ್ಮೀರ ವಿವಾದವನ್ನು ಭಾರತ-ಪಾಕಿಸ್ತಾನ ವಿಭಜನೆ ಸಂದರ್ಭದ ಇತ್ಯರ್ಥವಾಗದೆ ಉಳಿದಿರುವ ವಿಷಯ ಎಂದು ಹೇಳಿದ್ದು ವಿವಾದವನ್ನು ಬಗೆಹರಿಸಿಕೊಳ್ಳಲು ಅಂತಾರಾಷ್ಟ್ರೀಯ ಸಮುದಾಯ ಸಹಾಯ ಮಾಡಬೇಕೆಂದು ಕೋರಿದ್ದಾರೆ.
ಲಂಡನ್ ನಲ್ಲಿರುವ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಚಿಂತಕರ ಚಾವಡಿಯನ್ನುದ್ದೇಶಿಸಿ ಮಾತನಾಡಿರುವ ರಹೀಲ್ ಶರೀಫ್, ಭಾರತ-ಪಾಕ್ ವಿಭಜನೆಯಾದ ಸಂದರ್ಭದಲ್ಲಿ ಕಾಶ್ಮೀರ ವಿಷಯ ಇತ್ಯರ್ಥವಾಗದೇ ಉಳಿದಿದೆ. ಭಾರತ-ಪಾಕ್ ಪ್ರದೇಶದಲ್ಲಿ ಶಾಂತಿ ನೆಲೆಸಬೇಕೆಂದಿದ್ದರೆ ಅಂತಾರಾಷ್ಟ್ರೀಯ ಸಮುದಾಯ ಈ ವಿವಾದವನ್ನು ಬಗೆಹರಿಸಿಕೊಳ್ಳಲು ಸಹಾಯ ಮಾಡಬೇಕು ಎಂದು ಮನವಿ ಮಾಡಿದ್ದಾರೆ.  
ಅಪ್ಘಾನಿಸ್ತಾನದ ಬಗ್ಗೆಯೂ ಮಾತನಾಡಿರುವ ರಹಿಲ್ ಶರೀಫ್, ನೆರೆ ರಾಷ್ಟ್ರದಲ್ಲಿ ಶಾಂತಿ ಸ್ಥಾಪನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶರೀಫ್ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com