ಮಹಾಮಾನವತವಾದಿ, ಕ್ರಾಂತಿಕಾರಿ ಬಸವಣ್ಣನವರ ಪ್ರತಿಮೆಯನ್ನು ಅನಾವರಣ ಮಾಡಿ ಮಾತನಾಡಿದ ಮೋದಿ ಅವರು, ಜಗಜ್ಯೋತಿ ಬಸವೇಶ್ವರರ ಕರ್ಮಯೋಗದ ಕುರಿತು ಮಾತನಾಡಿದರು. ಲಂಡನ್ ನಲ್ಲಿ ಪ್ರತಿಮೆಗೆ ಜಾಗ ಸಿಕ್ಕಿದ್ದು, ಬಸವೇಶ್ವರರ ಪ್ರತಿಮೆಯನ್ನು ನಾನು ಅನಾವರಣಗೊಳಿಸಿದ್ದು ನನ್ನ ಸೌಭಾಗ್ಯ. ಇದು ನನ್ನ ಜೀವನದ ಅಪೂರ್ವ ಕ್ಷಣ ಎಂದು ಬರ್ಣಿಸಿದರು.