ಘಟನೆಯಲ್ಲಿ ಕನಿಷ್ಠ 42 ಮಂದಿ ಸಾವನ್ನಪ್ಪಿದ್ದು, ನೂರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸ್ ಮೂಲಗಳ ಪ್ರಕಾರ ಬಲೋಚಿಸ್ತಾನ ವಕೀಲರ ಸಂಘದ ಅಧ್ಯಕ್ಷ ಹಾಗೂ ವಕೀಲ ಬಿಲಾಲ್ ಅನ್ವರ್ ಕಾಸಿ ಅವರು ಅಪರಿಚಿತರಿಂದ ಗುಂಡೇಟಿಗೆ ಬಲಿಯಾಗಿದ್ದನ್ನು ವಿರೋಧಿಸಿ ಇಂದು ನ್ಯಾಯಾಲಯದ ಆವರಣದಲ್ಲಿ ಮೌನಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಅಲ್ಲಿಗೆ ಸೇನಾ ಸಮವಸ್ತ್ರದಲ್ಲಿ ಆಗಮಿಸಿದ ಉಗ್ರರು ನೋಡ ನೋಡುತ್ತಿದ್ದಂತೆಯೇ ಗುಂಡಿನ ಮಳೆಗರೆದರು.