ಭಾರತ-ಪಾಕ್ ನಡುವೆ ಶಾಂತಿ ಮಾತುಕತೆ ಮುಂದೂಡಿಕೆ

ನಾಳೆ ನಡೆಯಬೇಕಿದ್ದ ಭಾರತ- ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಮಾತುಕತೆ ಮುಂದೂಡಲಾಗಿದೆ ಎಂದು ಪಾಕಿಸ್ತಾನ...
ಭಾರತ-ಪಾಕಿಸ್ತಾನ ಧ್ವಜ
ಭಾರತ-ಪಾಕಿಸ್ತಾನ ಧ್ವಜ
Updated on

ಇಸ್ಲಾಮಾಬಾದ್: ನಾಳೆ ನಡೆಯಬೇಕಿದ್ದ ಭಾರತ- ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಮಾತುಕತೆ ಮುಂದೂಡಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಇಲಾಖೆ ಕಚೇರಿ ತಿಳಿಸಿದೆ.

ಜನವರಿ 15ರಂದು ಭಾರತ- ಶಾಂತಿ ಮಾತುಕತೆಯನ್ನು ನಿಗದಿಗೊಳಿಸಿತ್ತು. ಆದರೆ ನಾಳಿನ ಮಾತುಕತೆ ರದ್ದಾಗಿತ್ತು. ಬೇರೊಂದು ದಿನ ನಡೆಸಲು ಸಿದ್ಧತೆ ನಡೆಸಲಾಗಿದ್ದು. ದಿನಾಂಕ ಇನ್ನೂ ನಿಗದಿಪಡಿಸಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ಖಾಜಿ ಖಲೀಲುಲ್ಲಾ ತಿಳಿಸಿದ್ದಾರೆ.

ಇನ್ನೂ ಪಠಾಣ್ ಕೋಟ್ ದಾಳಿ ಸಂಬಂಧ ಇಸ್ಲಾಮಾಬಾದ್ ನಲ್ಲಿ  ಜೈಶ್- ಇ- ಮೊಹಮದ್ ಸಂಘಟನೆಯ  ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಉಗ್ರನನ್ನು ಬಂಧಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

ಉಗ್ರವಾದ ಎಲ್ಲಾ ದೇಶಗಳ ಶತ್ರವಾಗಿದೆ ಎಂದು ಹೇಳಿದ್ದಾರೆ. ಆದರೆ ಎರಡು ದಿನಗಳ ಹಿಂದೆ ಜೈಶ್- ಇ -ಮೊಹಮದ್ ಸಂಘಟನೆಯ ಮುಖ್ಯಸ್ಥನನ್ನು ಬಂಧಿಸಿ ರಹಸ್ಯ ಸ್ಥಳದಲ್ಲಿ ಇಡಲಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com