ಪಠಾಣ್ ಕೋಟ್ ಗೆ ಪಾಕ್ ತನಿಖಾ ತಂಡದ ಭೇಟಿ ನಂತರ ದ್ವಿಪಕ್ಷೀಯ ಮಾತುಕತೆ: ಸರ್ತಾಜ್ ಅಜೀಜ್

ಪಠಾಣ್ ಕೋಟ್ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪಾಕ್ ನ ತನಿಖಾ ತಂಡ ಪಠಾಣ್ ಕೋಟ್ ಗೆ ಭೇಟಿ ನೀಡಿದ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ
ಸರ್ತಾಜ್ ಅಜೀಜ್
ಸರ್ತಾಜ್ ಅಜೀಜ್
Updated on

ವಾಷಿಂಗ್ ಟನ್: ಪಠಾಣ್ ಕೋಟ್ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪಾಕ್  ತನಿಖಾ ತಂಡ ಪಠಾಣ್ ಕೋಟ್ ಗೆ ಭೇಟಿ ನೀಡಿದ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂದು ಪಾಕ್ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ.
ಅಮೆರಿಕಗೆ ಭೇಟಿ ನೀಡಿರುವ ಸರ್ತಾಜ್ ಅಜೀಜ್ , ಪಾಕಿಸ್ತಾನ ತನಿಖಾ ತಂಡ ಕೆಲವೇ ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಲಿದೆ, ಇದಾದ ಬಳಿಕ ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪಠಾಣ್ ಕೋಟ್ ದಾಳಿ ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ಮೇಲೆ ಪರಿಣಾಮ ಬೀರಿಸುವುದು ದುರದೃಷ್ಟಕರ, ದಾಳಿಯ ನಂತರ ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದ ಪಾಕ್ ಪ್ರಧಾನಿ ನವಾಜ್ ಷರೀಫ್ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದರು, ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ಪುನಾರಂಭಗೊಳ್ಳುವುದಕ್ಕೆ ಅಗತ್ಯವಿರುವ ಕ್ರಮಗಳನ್ನು ಪಾಕಿಸ್ತಾನ ಕೈಗೊಂಡಿದೆ ಎಂದು ಸರ್ತಾಜ್ ಅಜೀಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com