ಭಾರತದ ಹತ್ತಿ, ತರಕಾರಿಗಳ ಆಮದು ನಿಲ್ಲಿಸಿದ ಪಾಕಿಸ್ತಾನ

ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಇಸ್ಲಮಾಬಾದ್:  ಗಡಿಯಲ್ಲಿ ಎರಡು ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಕಾರಣ, ಭಾರತದ ಹತ್ತಿ ಸೇರಿದಂತೆ ಕೃಷಿ ಉತ್ಪನ್ನಗಳ ಆಮದನ್ನು ಪಾಕಿಸ್ತಾನ ನಿಲ್ಲಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಭಾರತದಿಂದ ಬರುವ ಕೃಷಿ ಉತ್ಪನ್ನಗಳು ವಾಘಾ ಗಡಿ ದಾಟಿ ನಂತರ ಕರಾಚಿ ಬಂದರಿಗೆ ಬರಬೇಕು. ಜೊತೆಗೆ ಅಲ್ಲಿಂದ ಅನುಮತಿ ಪಡೆದು ಮುಂದಿನ ಸ್ಥಳಗಳಿಗೆ ಕಳುಹಿಸಬೇಕಾಗುತ್ತದೆ ಎಂದು ಡಾನ್ ವರದಿ ಮಾಡಿದೆ.

ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಲಿಖಿತ ಆದೇಶವಿಲ್ಲದೇ ಭಾರತದಿಂದ ಕೃಷಿ ಪದಾರ್ಥಗಳ ಆಮದು ಸಾಧ್ಯವಿಲ್ಲ, ಹೀಗಾಗಿ ಭಾರತದ ಕೃಷಿ ಉತ್ಪನ್ನಗಳ ಆಮದನ್ನು ನಿಲ್ಲಿಸಲಾಗಿದೆ ಎಂದು ಸಸ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com