ಭಾರತದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ, ಅದರ ಅಪಾಯದ ಬಗ್ಗೆ ಕೇಳಲಾದ ಅನೇಕ ಪ್ರಶ್ನೆಗಳಿಗೆ ಉತ್ತರಿಸಿದ ಜೇಟ್ಲಿ, ಸಮಸ್ಯೆಯನ್ನು ನಾವು ಅತಿಗೊಳಿಸಲು ಹೋಗಬಾರದು. ಎರಡೂ ದೇಶಗಳು ಪರಮಾಣು ಶಕ್ತಿಯುತವಾಗಿದ್ದು, ಪರಮಾಣು ಬೆದರಿಕೆಯೊಡ್ಡುವುದು ಪಾಕಿಸ್ತಾನದ ತಂತ್ರವಾಗಿದೆ. ಅದು ಎಂದಿಗೂ ಭಾರತದ ತಂತ್ರವಾಗಿಲ್ಲ. ನೀವು ಸರ್ಜಿಕಲ್ ಸ್ಟ್ರೈಕ್ ನ ಆರ್ಥಿಕ ಪರಿಣಾಮವನ್ನು ನೋಡಿದರೆ ಕರೆನ್ಸಿ ಮಾರುಕಟ್ಟೆಯಲ್ಲಿ ಕ್ರಾಂತಿಯನ್ನು ನೋಡಬಹುದು. ಖರ್ಚುವೆಚ್ಚದ ವಿಷಯದಲ್ಲಿ ರಕ್ಷಣಾ ವಲಯ ಯಾವತ್ತೂ ಮುಖ್ಯವಾಗುತ್ತದೆ. ಯಾಕೆಂದರೆ ಭಾರತಕ್ಕೆ ರಾಷ್ಟ್ರೀಯ ಭದ್ರತೆ ಮತ್ತು ಸಾರಭೌಮತ್ವ ಮುಖ್ಯವಾಗಿದೆ ಎಂದು ಹೇಳಿದರು.