ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಂ ಅವರ ವಿರುದ್ಧ ತೀರ್ಪು ಪ್ರಕಟಗೊಂಡಿರುವ ಹಿನ್ನಲೆಯಲ್ಲಿ ಹರಿಯಾಣದಲ್ಲಿ ಉಂಟಾಗಿರುವ ಹಿಂಸಾಚಾರದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಹರಿಯಾಣದಲ್ಲಿ ಹಿಂಸಾಚಾರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದು, ಜನಸಂದಣಿ ಹೆಚ್ಚಿರುವ ಪ್ರದೇಶಗಳಿಂದ ನಾಗರೀಕರು ದೂರವಿರಬೇಕು ಎಂದು ಬ್ರಿಟನ್ ಸರ್ಕಾರ ತನ್ನ ನಾಗರೀಕರಿಗೆ ಸಲಹೆಗಳನ್ನು ನೀಡಿದೆ.