ಮುಂಬರುವ ಸೆಪ್ಟೆಂಬರ್ ನಲ್ಲಿ ಚೀನಾದಲ್ಲಿ ಬ್ರಿಕ್ಸ್ ಸಮಾವೇಶ ನಡೆಯಲಿದ್ದು, ಈ ಮಹತ್ವದ ಸಮಾವೇಶಕ್ಕೆ ಡೋಕ್ಲಾಂ ವಿವಾದದ ಕರಿ ನೆರಳು ಅಡ್ಡಿಯಾಗಬಹುದು ಎಂಬ ಶಂಕೆ ಮೇರೆಗೆ ಅಧಿಕಾರಿಗಳು ಸಂಧಾನ ನಡೆಸಿದ್ದರು. ಡೋಕ್ಲಾಂ ವಿವಾದ ಮುಂದುವರೆದಿದ್ದರೆ ಚೀನಾ ಬ್ರಿಕ್ಸ್ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗೈರಾಗುವ ಸಾಧ್ಯತೆ ಇತ್ತು. ಹೀಗಾಗಿ ಚೀನಾ ಅನಿವಾರ್ಯವಾಗಿ ಡೋಕ್ಲಾಂ ವಿವಾದಕ್ಕೆ ತೆರೆ ಎಳೆಯಲೇಬೇಕಿತ್ತು. ಅದರಂತೆ ಇದೀಗ ಸಂಧಾನ ಯಶಸ್ವಿಯಾಗಿತ್ತು. ಆದರೆ ಇದೀಗ ಚೀನಾ ಮತ್ತೆ ಗಡಿಯಲ್ಲಿ ಸೇನೆ ನಿಯೋಜನೆಗೆ ಮುಂದಾಗಿರುವುದು ಬ್ರಿಕ್ಸ್ ಸಮಾವೇಶದ ಮೇಲೆ ಕರಿನೆರಳು ಮೂಡಲಿದೆ.