ಈ ಹಿಂದೆ ಉಭಯ ದೇಶಗಳ ಸಂಧಾನ ಮಾತುಕತೆ ಮೇರೆಗೆ, ಈ ಭಾಗದಲ್ಲಿ ನಿಯೋಜಿಸಿದ್ದ ಸೇನೆಯನ್ನು ಚೀನಾ ಮತ್ತು ಭಾರತ ದೇಶಗಳು ವಾಪಸ್ ಕರೆಸಿಕೊಂಡಿತ್ತು. ಇದಕ್ಕೂ ಮೊದಲು ಈ ಭಾಗದಲ್ಲಿ ಭಾರತ ಮತ್ತು ಚೀನಾ ಸೈನಿಕರು ಪರಸ್ಪರ ವಾಗ್ವಾದ ನಡೆಸಿದ್ದರಲ್ಲದೇ ಕೈಕೈ ಮಿಲಾಯಿಸಿದ್ದರು. ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಚೀನಾ ಸೈನಿಕರು ಕಲ್ಲು ತೂರಾಟ ಕೂಡ ಮಾಡಿದ್ದರು. ಸುಮಾರು 73 ದಿನಗಳ ಕಾಲ ಹಗ್ಗ ಜಗ್ಗಾಟ ನಡೆದು, ನಂತರ ಈಶಾನ್ಯ ಭಾಗದೊಂದಿಗೆ ಭಾರತವನ್ನು ಸೇರಿಸುವ ಭಾಗದಲ್ಲಿ ನಿಯೋಜಿಸಿದ್ದ ಸೇನೆಯನ್ನು ಚೀನಾ ಆಗಸ್ಟ್ 28ರಂದು ಹಿಂಪಡೆದಿತ್ತು. ಈ ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೂಡ ಸ್ಥಗಿತಗೊಳಿಸಿತ್ತು.