ಭಾರತ ಚೀನಾದೊಂದಿಗೆ ಭೂಗಡಿ ವಿವಾದ ಹೊಂದಿದ್ದು, ಹಿಂದೂ ಮಹಾಸಾಗರ ಪ್ರದೇಶದಲ್ಲಿ ನೌಕಾ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರುವುದರ ಬಗ್ಗೆ ಆತಂಕ ವ್ಯಕ್ತವಾಗಿದೆ. ಇದರೊಂದಿಗೆ ಭಾರತದ ಎನ್ ಎಸ್ ಜಿ ಸದಸ್ಯತ್ವ ಹಾಗೂ ವಿಶ್ವಸಂಸ್ಥೆಯಲ್ಲಿ ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಭಾರತದ ಪ್ರಯತ್ನಕ್ಕೆ ಅಡ್ಡಿ ಉಂಟುಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಚೀನಾದ ಪ್ರಾಬಲ್ಯವನ್ನು ತಗ್ಗಿಸಲು ಭಾರತ ಮುಂದಾಗಿದ್ದು ವಿಯೆಟ್ನಾಂ, ಮಲೇಷ್ಯಾ, ಫಿಲಿಪೀನ್ಸ್ ನೊಂದಿಗೆ ರಕ್ಷಣಾ ಕ್ಷೇತ್ರದ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುವ ಭಾಗವಾಗಿ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳನ್ನು ಮಾರಾಟಕ್ಕೆ ಮುಂದಾಗಿದ್ದು ಚೀನಾಗೂ ಇದರಿಂದ ವಿಶ್ಲೇಷಿಸಲಾಗುತ್ತಿದೆ.