2001ರಲ್ಲಿ ಭಾರತದ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಚಿಂತಿಸಿದ್ದ ಮುಷರಫ್ ಗೆ ಕಾಡಿದ್ದು ಪ್ರತೀಕಾರದ ಭಯ!

2001 ರಲ್ಲಿ ಭಾರತದ ಸಂಸತ್ ಮೇಲೆ ಭಯೋತ್ಪಾದಕರ ದಾಳಿ ನಡೆದು ಭಾರತ-ಪಾಕಿಸ್ತಾನದ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದ ವೇಳೆ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಪಾಕಿಸ್ತಾನದ...
ಜನರಲ್ ಪರ್ವೇಜ್ ಮುಷರಫ್
ಜನರಲ್ ಪರ್ವೇಜ್ ಮುಷರಫ್
ದುಬೈ: 2001 ರಲ್ಲಿ ಭಾರತದ ಸಂಸತ್ ಮೇಲೆ ಭಯೋತ್ಪಾದಕರ ದಾಳಿ ನಡೆದು ಭಾರತ-ಪಾಕಿಸ್ತಾನದ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದ ವೇಳೆ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಪಾಕಿಸ್ತಾನದ ಅಂದಿನ ಸರ್ವಾಧಿಕಾರಿ ಜನರಲ್ ಪರ್ವೇಜ್ ಮುಷರಫ್ ಚಿಂತಿಸಿದ್ದರು, ಆದರೆ ಪ್ರತೀಕಾರದ ಭಯದಿಂದ ಹಿಂಜರಿದಿದ್ದರು ಎಂದು ತಿಳಿದುಬಂದಿದೆ. 
ಜಪಾನ್ ನ ಪತ್ರಿಕೆಯೊಂದು ಈ ಬಗ್ಗೆ ಹೇಳಿದ್ದು, ಭಾರತದ ಮೇಲೆ ದಾಳಿ ನಡೆಸುವ ನಿಟ್ಟಿನಲ್ಲಿ ಅಣ್ವಸ್ತ್ರಗಳನ್ನು ಸಜ್ಜುಗೊಳಿಸುವುದರ ಸಂಬಂಧ ಚಿಂತಿಸುತ್ತಿದ್ದ ಮುಷರಫ್ ನಿದ್ದೆ ಇಲ್ಲದೇ ಹಲವು ರಾತ್ರಿಗಳನ್ನು ಕಳೆದಿದ್ದರು ಎಂದಿದೆ.  2001 ರಲ್ಲಿ ಭಾರತದ ಸಂಸತ್ ಮೇಲೆ ದಾಳಿ ನಡೆದಾಗ ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕು ಮೂಡಿತ್ತು, ಇದರ ಹೊರತಾಗಿಯೂ ಪರ್ವೇಜ್ ಮುಷರಫ್ ಅಣ್ವಸ್ತ್ರ ದಾಳಿ ನಡೆಸುವ ಬಗ್ಗೆ ಯೋಜಿಸಿದ್ದರು ಅಷ್ಟೇ ಅಲ್ಲದೇ ಅಣ್ವಸ್ತ್ರ ಬಳಕೆ ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಮುಷರಫ್ ಸಾರ್ವಜನಿಕವಾಗಿಯೂ ಹೇಳಿದ್ದರು. 
ಅಂದಿನ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ಎರಡೂ ರಾಷ್ಟ್ರಗಳ ಕ್ಷಿಪಣಿಗಳಲ್ಲಿ ಅಣ್ವಸ್ತ್ರ ಸಿಡಿತಲೆಗಳು ಸಿದ್ಧವಾಗಿರಲಿಲ್ಲವಾದ್ದರಿಂದ ಅವುಗಳನ್ನು ಪ್ರಯೋಗಕ್ಕೆ ಸಿದ್ಧಗೊಳಿಸಬೇಕಾದರೆ ಒಂದೆರಡು ದಿನಗಳು ಬೇಕಾಗುತ್ತಿತ್ತು ಎಂದು ಪತ್ರಿಕೆ ವಿಶ್ಲೇಷಿಸಿದೆ. 
ಅಣ್ವಸ್ತ್ರ ಸಿಡಿತಲೆಗಳನ್ನು ಪ್ರಯೋಗಕ್ಕೆ ಅಣಿಗೊಳಿಸುವಂತೆ ಸೂಚಿಸಿದ್ದರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಮುಷರಫ್ ನಾವು ಆ ಕೆಲಸಕ್ಕೆ ಕೈಹಾಕಲಿಲ್ಲ, ಭಾರತವೂ ಹಾಗೆ ಮಾಡಿರಲಿಲ್ಲ ಎಂದು ಅಂದುಕೊಳ್ಳುತ್ತೇವೆ ದೇವರಿಗೆ ಧನ್ಯವಾದಗಳು (Thank God) ಎಂಬ ಪ್ರತಿಕ್ರಿಯೆ ನೀಡಿದ್ದು,  ಪ್ರತೀಕಾರದ ಭಯದಿಂದ ಮುಷರಫ್ ತಮ್ಮ ಚಿಂತನೆಯಿಂದ ಹಿಂಜರಿದಿದ್ದರು ಎಂದು ವಿಶ್ಲೇಷಿಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com