ಜಪಾನ್ ನ ಪತ್ರಿಕೆಯೊಂದು ಈ ಬಗ್ಗೆ ಹೇಳಿದ್ದು, ಭಾರತದ ಮೇಲೆ ದಾಳಿ ನಡೆಸುವ ನಿಟ್ಟಿನಲ್ಲಿ ಅಣ್ವಸ್ತ್ರಗಳನ್ನು ಸಜ್ಜುಗೊಳಿಸುವುದರ ಸಂಬಂಧ ಚಿಂತಿಸುತ್ತಿದ್ದ ಮುಷರಫ್ ನಿದ್ದೆ ಇಲ್ಲದೇ ಹಲವು ರಾತ್ರಿಗಳನ್ನು ಕಳೆದಿದ್ದರು ಎಂದಿದೆ. 2001 ರಲ್ಲಿ ಭಾರತದ ಸಂಸತ್ ಮೇಲೆ ದಾಳಿ ನಡೆದಾಗ ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕು ಮೂಡಿತ್ತು, ಇದರ ಹೊರತಾಗಿಯೂ ಪರ್ವೇಜ್ ಮುಷರಫ್ ಅಣ್ವಸ್ತ್ರ ದಾಳಿ ನಡೆಸುವ ಬಗ್ಗೆ ಯೋಜಿಸಿದ್ದರು ಅಷ್ಟೇ ಅಲ್ಲದೇ ಅಣ್ವಸ್ತ್ರ ಬಳಕೆ ಮಾಡುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ ಎಂದು ಮುಷರಫ್ ಸಾರ್ವಜನಿಕವಾಗಿಯೂ ಹೇಳಿದ್ದರು.