ಫೈಸ್ಲಾಬಾದ್ ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅಬ್ದುಲ್ ರೆಹಮಾನ್ ಮಕ್ಕಿ, ಬರವಣಿಗೆಯ ಶಕ್ತಿಯ ಮೂಲಕ ಕಾಶ್ಮೀರದ ಉದ್ದೇಶಕ್ಕೆ ಕೈ ಜೋಡಿಸುವಂತೆ ಕೇಳಿದ್ದಾರೆ. ಕಳೆದ ವರ್ಷ ಜುಲೈ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿಯ ಹತ್ಯೆಯ ನಂತರ ಕಾಶ್ಮೀರದಲ್ಲಿ ಅಸ್ಥಿರತೆ ಉಂಟಾಗಿದೆ. ಅಬ್ದುಲ್ ರೆಹಮಾನ್ ಮಕ್ಕಿ ಜೆಡಿಯು ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ನ ಸಹೋದರನಾಗಿದ್ದು, ಮಕ್ಕಿಯ ತಲೆಗೆ 2 ಮಿಲಿಯನ್ ಬಹುಮಾನ ಘೋಷಿಸಲಾಗಿದೆ.