ಇದೇ ವೇಳೆ ಪಾಕಿಸ್ತಾನದ ಗಡಿ ಭಯೋತ್ಪಾದನೆ ಕುರಿತ ಪ್ರಶ್ನೆಗೆ ಉತ್ತರಿಸುವ ಅವರು, ಭಯೋತ್ಪಾದನೆ ಜಾಗತಿಕ ಪಿಡುಗು ಎಂದು ಭಾರತ ಈ ಹಿಂದಿನಿಂದಲೂ ಹೇಳುತ್ತಲೇ ಬಂದಿದೆ. ಉಗ್ರರನ್ನು ಒಳ್ಳೆಯವರು, ಕೆಟ್ಟವರು ಎಂಬು ವಿಭಾಗಿಸಬಾರದು. ಉಗ್ರತ್ವ ಪಾಲನೆ ಮಾಡುವವರೆಲ್ಲರೂ ಕ್ರಿಮಿನಲ್ ಗಳಾಗಿರುತ್ತಾರೆ. ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಮಟ್ಟ ಹಾಕಬೇಕೆಂದು ತಿಳಿಸಿದ್ದಾರೆ.