ಸಿಂಧೂ ನದಿ ವಿವಾದ: ಮೀಸಲಾತಿ ಆಗ್ರಹ ಒಪ್ಪಿಕೊಂಡ ಭಾರತ ಎಂದು ಪಾಕ್ ಮಾಧ್ಯಮಗಳ ವರದಿ

ಸಿಂಧೂ ನದಿ ನೀರು ವಿವಾದ ಸಂಬಂಧ ಮಿಯಾರ್ ಅಣೆಕಟ್ಟುವಿನಲ್ಲಿ ಇಸ್ಲಾಮಾಬಾದ್'ಗೆ ಮೀಸಲಾತಿ ನೀಡಬೇಕೆಂಬ ಆಗ್ರಹವನ್ನು ಭಾರತ ಒಪ್ಪಿಕೊಂಡಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ಮಂಗಳವಾರ ವರದಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಇಸ್ಲಾಮಾಬಾದ್: ಸಿಂಧೂ ನದಿ ನೀರು ವಿವಾದ ಸಂಬಂಧ ಮಿಯಾರ್ ಅಣೆಕಟ್ಟುವಿನಲ್ಲಿ ಇಸ್ಲಾಮಾಬಾದ್'ಗೆ ಮೀಸಲಾತಿ ನೀಡಬೇಕೆಂಬ ಆಗ್ರಹವನ್ನು ಭಾರತ ಒಪ್ಪಿಕೊಂಡಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ. 
ಸಿಂಧೂ ನಂದಿ ನೀರು ವಿವಾದ ಸಂಬಂಧ ಸಿಂಧು ನದಿ ಆಯೋಗ ಮಾತುಕತೆ ಆರಂಭಿಸಿದ್ದು, ಎರಡನೇ ದಿನದ ಮಾತುಕತೆ ವೇಳೆ ಮಿಯಾರ್ ಅಣೆಕಟ್ಟುವಿನಲ್ಲಿ ಇಸ್ಲಾಮಾಬಾದ್'ಗೆ ಮೀಸಲಾತಿ ನೀಡಲು ಭಾರತದ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡುತ್ತಿವೆ. 
ಜಲವಿದ್ಯುತ್ ಯೋಜನೆಗೆ ಪಿ.ಕೆ. ಸಕ್ಸೇನಾ ಅವರು ಒಪ್ಪಿದೆ ಸೂಚಿಸಿದ್ದಾರೆ. ಮಿಯಾರ್ ಯೋಜನೆಯ ವಿನ್ಯಾಸವನ್ನು ಪಾಕಿಸ್ತಾನದ ಜೊತೆಗೆ ಭಾರತ ಶೀಘ್ರದಲ್ಲಿಯೇ ಹಂಚಿಕೊಳ್ಳಲಿದೆ ಎಂದು ಮಿರ್ಜಾ ಆಸಿಫ್ ಬೇಗ್ ಅವರು ಹೇಳಿದ್ದಾರೆಂದು ಪಾಕ್ ಮಾಧ್ಯಮಗಳು ತನ್ನ ವರದಿಯಲ್ಲಿ ತಿಳಿಸಿವೆ. 
ಸಿಂಧೂ ನೀರು ಹಂಚಿಕೆ ಆಯೋಗದ ಆಯುಕ್ತ ಪಿ.ಕೆ. ಸಕ್ಸೇನಾ ನೇತೃತ್ವದಲ್ಲಿ 10 ಜನ ಸದಸ್ಯರ ತಂಡ ಪಾಕಿಸ್ತಾನದ ಮಿರ್ಜಾ ಆಸಿಫ್ ಬೇಗ್ ನೇತೃತ್ವದ ತಂಡದೊಂದಿಗೆ ನಿನ್ನೆಯಿಂದಲೇ ಸಭೆ ಆರಂಭವಾಗಿತ್ತು. 
ಈ ವರೆಗೂ ಉಭಯ ದೇಶಗಳ ನಡುವೆ 112 ಬಾರಿ ಸಭೆ ನಡೆದಿದೆ. 2016ರಲ್ಲಿ ಸೆಪ್ಟಂಬರ್ ನಲ್ಲಿ ಸಭೆ ನಡೆಸಲು ಉಭಯ ರಾಷ್ಟ್ರಗಳು ತೀರ್ಮಾನ ಕೈಗೊಂಡಿತ್ತು. ಆಧರೆ, ಉರಿ ಸೇನಾ ಮೇಲೆ ನಡೆದ ಉಗ್ರರು ದಾಳಿ ನಡೆಸಿದ ಹಿನ್ನಲೆಯಲ್ಲಿ ಸಭೆಯನ್ನು ನಡೆಸಲಾಗಿತ್ತು. 2015ರ ಬಳಿಕ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ನಡುವೆ ಸಭೆ ನಡೆಯುತ್ತಿದ್ದು, ಪ್ರಸ್ತುತ ನಡೆಯುತ್ತಿರುವ ಸಭೆ 113ನೇ ಸಭೆಯಾಗಿದೆ. 
ಚೆನಾಬ್ ನದಿಗೆ ಒಂದು ಸಾವಿರ ಮೆ.ವಾ ಸಾಮರ್ಥ್ಯದ ಪಕುಲ್ ದುಲ್ ಸ್ಥಾವರ, ಚೆನಾಬ್ ನ ಉಪನದಿಗಳಾಗಿರುವ ಮಿಯಾರ್ ನಲ್ಲಾ ನದಿಗೆ 120 ಮೆ.ವಾ ಸಾಮರ್ಥ್ಯ ಹಾಗೂ ಕಲ್ನಾಯ್ ನದಿಗೆ 43 ಮೆ.ವಾ ಸಾಮರ್ಥ್ಯದ ಜಲವಿದ್ಯುತ್ ಸ್ಥಾಪರಗಳನ್ನು ನಿರ್ಮಿಸಲು ಭಾರತ ಯೋಜನೆ ಸಿದ್ಧಪಡಿಸಿದೆ. ಆದರೆ, ಈ ಜಲವಿದ್ಯುತ್ ಸ್ಥಾವರಗಳ ನಿರ್ಮಾಣ 1960ರ ಸಿಂಧೂನದಿ ಒಪ್ಪಂದದ ಉಲ್ಲಂಘನೆಯಾಗುತ್ತದೆ ಎಂದು ಪಾಕಿಸ್ತಾನ ವಾದಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com