ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಅನಿಲ್ ನೌತಿಯಾಲ್ ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದು, 20,321 ಭಾರತೀಯರು ದೇಶಕ್ಕೆ ವಾಪಾಸ್ಸಾಗಲು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಪೈಕಿ 1,500 ಬ್ಲೂ ಕಾಲರ್ ಕೆಲಸಗಾರರು ತಮಿಳುನಾಡಿನ ಮೂಲದವರಾಗಿದ್ದು, ಕ್ಷಮಾದಾನದ ಯೋಜನೆಯಡಿ ವಾಪಸ್ಸಾಗುತ್ತಿರುವವರ ಪೈಕಿ ಹೆಚ್ಚಿನವರು ಉತ್ತರ ಪ್ರದೇಶ ಹಾಗೂ ಬಿಹಾರ ಮೂಲದವರು ಎಂದು ಅನಿಲ್ ನೌತಿಯಾಲ್ ಹೇಳಿದ್ದಾರೆ.