ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ ಮಿತಿ ಮೀರಿ ವರ್ತಿಸಿದೆ ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯವನ್ನು ಟೀಕಿಸಿದ್ದು, ವಿಷಯಾಂತರದ ತಂತ್ರ ಎಂದು ಹೇಳಿದೆ. ಪಾಕಿಸ್ತಾನ ರಕ್ಷಣಾ ಸಚಿವ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು "ಕಳೆದ ತಿಂಗಳು ಪಾಕಿಸ್ತಾನ ಕುಲ್ ಭೂಷಣ್ ಜಾಧವ್ ಗೆ ನೀಡಲಾಗಿದ್ದ ಗಲ್ಲು ಶಿಕ್ಷೆಗೆ ತಡೆ ನೀಡಿದೆ. ಪಾಕಿಸ್ತಾನ ನೆಲದಲ್ಲಿ ಭಾರತ ತಾನೆ ರೂಪಿಸಿದ್ದ ಭಯೋತ್ಪಾದನೆಯಿಂದ ವಿಷಯಾಂತರ ಮಾಡಲು ಐಸಿಜೆ ಮೊರೆ ಹೋಗಿತ್ತು. ಭಾರತ ಪಾಕಿಸ್ತಾನದ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿ ಪಾಕ್ ಜಿನಿವಾ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯ ಈ ತೀರ್ಪು ನೀಡಿದೆ ಎಂದಿದ್ದಾರೆ.